ಅತಿಥಿ ಉಪನ್ಯಾಸಕರ ಸೇವೆ ಅನನ್ಯ- ಡಾ ರಾಜು ಕಂಬಾರ
ರಾಮದುರ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವೆ ಅನನ್ಯವಾದದ್ದಾಗಿದೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘಟನೆಯ ಮುಖಂಡ ಡಾ. ರಾಜು ಕಂಬಾರ ಹೇಳಿದರು.ಪಟ್ಟಣದ ಎಸ್ಐಎಸ್ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅತಿಥಿ ಉಪನ್ಯಾಸಕ ಶಂಕರ ಚುಳುಕಿ ಅವರನ್ನು ಸತ್ಕರಿಸಿ,ಅಭಿನಂದನೆ ಸಲ್ಲಿಸಿ ಮಾತನಾಡಿದ ಕಂಬಾರರು, ರಾಜ್ಯದಲ್ಲಿ ಸುಮಾರು 10000 ಮೇಲ್ಪಟ್ಟು ಅತಿಥಿ ಉಪನ್ಯಾಸಕರು ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಾ, ಉನ್ನತ ಶಿಕ್ಷಣಕ್ಕೆ…
