ಭಿನ್ನ ವ್ಯಕ್ತಿತ್ವಕ್ಕೆ ಸಾಕ್ಷಿಯಾದ ಸಭಾಪತಿ!
ಸಾಮಾನ್ಯವಾಗಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಚಿವರು, ಶಾಸಕರು ಹಾಗೂ ಗಣ್ಯರು ಆಗಮಿಸಿದಾಗ, ತಮ್ಮ ಭಾಷಣ ಮುಗಿಸಿ ಮತ್ತೊಂದು ಕಾರ್ಯಕ್ರಮ ಅಥವಾ ತುರ್ತು ಕೆಲಸದ ನೆಪದಲ್ಲಿ ಕಾರ್ಯಕ್ರಮ ಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸುವುದು ಕಂಡುಬರುತ್ತದೆ. ಆದರೆ ‘ಜಾಣಗೆರೆ–75’ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಇದಕ್ಕೆ ತದ್ವಿರುದ್ಧವಾದ ನಡೆ ತೋರುವ ಮೂಲಕ ಗಮನ ಸೆಳೆದರು.ಜಾಣಗೆರೆ ವೆಂಕಟರಾಮಯ್ಯ ಹಾಗೂ ಅವರ ಧರ್ಮಪತ್ನಿಯನ್ನು ಸನ್ಮಾನಿಸಿದ ಬಳಿಕ ಸಲೀಂ ಅಹ್ಮದ್ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಕಾರ್ಯಕ್ರಮದಿಂದ ನಿರ್ಗಮಿಸಲಿದ್ದಾರೆ ಎಂದೇ ಅಲ್ಲಿದ್ದವರು ಭಾವಿಸಿದ್ದರು….
