ಯಾದಗಿರಿ- ಆಲಮಟ್ಟಿ ರೈಲುಮಾರ್ಗ ಯೋಜನೆ ಅನುಮೋದನೆಗೆ ಮನವಿ
ರಾಯಚೂರು ಸಂಸದ ಜಿ.ಕುಮಾರ ನಾಯಕ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಆಲಮಟ್ಟಿ -ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ಒತ್ತಾಯಿಸಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ, ತೆಲಂಗಾಣ ಹಾಗೂ ಒಡಿಶಾದಲ್ಲಿ ರೈಲ್ವೆ ಸಂಪರ್ಕ ಜಾಲ ಕಡಿಮೆ ಇದೆ. ಈ ಲೋಪವನ್ನು ಸರಿಪಡಿಸಲು ರಾಜ್ಯದ ರೈಲು ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಲಮಟ್ಟಿ -ಯಾದಗಿರಿ ರೈಲು ಮಾರ್ಗದ ಬೇಡಿಕೆಯು ದಶಕಗಳಷ್ಟು ಹಳೆಯದು ಎಂದು ಸಚಿವರ ಗಮನಕ್ಕೆ…
