BREAKING NEWS

ಮಡಿಕೇರಿಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾಗೃತಿ ಕಾರ್ಯಾಗಾರ 30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, ತಪ್ಪಿದ್ದಲ್ಲಿ 5 ವರ್ಷ ಜೈಲು – ಅಧಿಕಾರಿಗಳಿಗೆ ಆಯುಕ್ತರಾದಡಾ.ಹರೀಶ್ ಕುಮಾರ್ ಕ್ಲಾಸ್‌

ಮಡಿಕೇರಿ: ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು. 30 ದಿನದ ಒಳಗಡೆ ಮಾಹಿತಿ ನೀಡಬೇಕೆಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ ಮತ್ತು ಡಾ. ಹರೀಶ್ ಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು…

Read More

ಇಂದು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಭಾನುವಾರ ಡಿ.21 ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ಹಾಕಲು 33,258 ಬೂತ್‌ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ…

Read More

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ರಾಜ್ಯ ಸರಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಮತ್ತು…

Read More

ರಾಮದುರ್ಗ | ಪೊಲೀಸ್ ಅಧಿಕಾರಿಗಳಿಂದ ಅಪರಾಧ ತಡೆ ಮಾಸಾಚರಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಸವೇಶ್ವರ ಬಾಲಿಕಿಯರ ನೂತನ ಪ್ರೌಢ ಶಾಲೆ ಆವರಣದಲ್ಲಿ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳ ಬಗ್ಗೆ ರಸ್ತೆ ಸುರಕ್ಷತೆ ಬಗ್ಗೆ ಹಾಗೂ ಸೈಬರ್ ಅಪರಾಧಗಳು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಇತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.

Read More

ಲೋಕಾಪುರ-ಧಾರವಾಡ ಹೊಸ ರೈಲ್ವೆ ಮಾರ್ಗಕ್ಕೆ ನಾರಾಯಣಸಾ ಕೆ ಭಂಡಾಗೆ ಕೇಂದ್ರ ರೈಲ್ವೆ ಮಂತ್ರಿಗೆ ಒತ್ತಾಯ

ರಾಜ್ಯ ಸಭಾ ಸದಸ್ಯ ನಾರಾಯಣಸಾ ಕೆ ಭಂಡಾಗೆ ಅವರು ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಶ್ರೀರೇಣುಕಾ ಯಲ್ಲಮ್ಮ ದೇವಿ ಭಕ್ತರ ಅನುಕೂಲಕ್ಕಾಗಿ ಸವದತ್ತಿ ಮಾರ್ಗವಾಗಿ ಲೋಕಾಪುರ- ಧಾರವಾಡ ನಡುವೆ ಹೊಸ ರೈಲ್ವೆ ಮಾರ್ಗ ನಿರ್ಮಿಸಲು ಸಂಸದ ಪ್ರಹ್ಲಾದ್ ಜೋಶಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದರು. ದಿಲ್ಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪ್ರಹ್ಲಾದ್ ಜೋಶಿ ”ಈ ರೈಲ್ವೆ ಮಾರ್ಗ ನಿರ್ಮಾಣಕ್ಕೆ…

Read More

ಅಂತರಾಷ್ಟ್ರೀಯ ಅಲ್ಪಸಂಖ್ಯಾತರ ದಿನಾಚರಣೆಯ ಅಂಗವಾಗಿ ದುಂಡು ಮೇಜಿನ ಸಭೆ

ರಾಮದುರ್ಗ ಭಾರತ ದೇಶ ಜಾತ್ಯಾತೀತ ದೇಶ. ಇಲ್ಲಿ ಎಲ್ಲ ಸಮಾಜದವರು ಕೂಡಿ ಬಾಳಿದಂತಹ ದೇಶ. ಈ ದೇಶದಲ್ಲಿ ಇವತ್ತು ಜಾತಿ ಆಧಾರದಲ್ಲಿ ನಮ್ಮನ್ನು ಒಡೆಯುವ ಜಾತಿವಾದಿಗಳು ಕುತಂತ್ರ ಮಾಡುತ್ತಿದ್ದಾರೆ. ಇದನ್ನು ತಡೆಯಲು ನಾವೆಲ್ಲರೂ ಒಂದಾಗಿ ಸಂಘಟನೆಯನ್ನು ಕಟ್ಟಿಕೊಂಡು ಹೋರಾಟಕ್ಕೆ ಸಜ್ಜಾಗಬೇಕೆಂದು ಸಾನಿಧ್ಯ ವಹಿಸಿದ ಶ್ರೀ.ಮ.ನಿ.ಪ್ರ ಶಾಂತವೀರ ಸ್ವಾಮಿಗಳು ಶೀವಮೂರ್ತೇಶ್ವರ ಮಠ ರಾಮದುರ್ಗ ಇವರು ಕಾರ್ಮಿಕ ಕಚೇರಿಯಲ್ಲಿ ನಡೆದ ಇನ್ಸಾಫ್ ಕಮಿಟಿ ನೇತೃತ್ವದಲ್ಲಿ ನಡೆದ ಅಂತರಾಷ್ಟ್ರೀಯ ಅಲ್ಪಸಂಖ್ಯಾತರ ದಿನಾಚರಣೆ ಅಂಗವಾಗಿ ನಡೆದಿರುವ ದುಂಡು ಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು….

Read More

ಬಲಿಷ್ಠ ದೇಶ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಹುಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ನಡೆಸಲಾಗುತ್ತಿರುವ ಪ್ರತಿಭಾನ್ವೇಷಣೆ ಪರೀಕ್ಷೆಯು ರಾಜ್ಯದಲ್ಲಿ ಮಾದರಿಯಾಗಿದ್ದು, ಇದೇ ರೀತಿ ರಾಜ್ಯಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ ಏರ್ಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ, ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ನಡೆದ ಪ್ರತಿಭಾನ್ವೇಷಣೆ ಪರೀಕ್ಷೆ-2025ರ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದರು. ತಂದೆ ತಾಯಿಗಳ ಆಶಯದಂತೆ ಮಕ್ಕಳು ದೇಶಕ್ಕೆ…

Read More

ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಪತ್ರ ಚಳುವಳಿ.! ಚಳುವಳಿಯನ್ನು ಬೆಂಬಲಿಸಿ ಪತ್ರ ಬರೆದ ನ್ಯಾಯವಾದಿಗಳು

ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಲೋಕಾಪೂರ-ಧಾರವಾಡ ನೂತನ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಇದೇ ಡಿಸೆಂಬರ್ 10 ರಿಂದ ಪತ್ರ ಚಳುವಳಿಯನ್ನು ಪ್ರಾರಂಭಿಸಿದೆ ಡಿಸೆಂಬರ್ 10 ರಂದು ಪಟ್ಟಣದ ಹೊರ ವಲಯದಲ್ಲಿರುವ ಶ್ರೀಮತಿ ಈರಮ್ಮ ಯಾದವಾಡ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿ ಮುಖಂಡ ರೆಲ್ಲರೂ ಸೇರಿ ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವ ಕುರಿತು ಕಾಲೇಜು ವಿದ್ಯಾರ್ಥಿಗಳಿಂದ ಕೇಂದ್ರ…

Read More

ಕಲ್ಲಾಪೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಲ್ಲಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆಕಾರ್ಯಕ್ರಮವನ್ನು ಎಸ್ ಡಿಎಂಸಿ ಅಧ್ಯಕ್ಷ ಪ್ರಕಾಶ ಬ. ಅಳಗೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಮಾಡಿದರು.ಅತಿಥಿಗಳಾಗಿ ಎಸ್ ಡಿಎಂಸಿ ಉಪಾಧ್ಯಕ್ಷರು ಕಮಲಾ ಕ. ಮೇಟಿ , ಸದಸ್ಯರಾದ ಬಸವರಾಜ ಕ. ಕಡಕೋಳ, ಪ್ರಕಾಶ ಶಿ. ಮೊರಬದ, ಮಹಾಂತೇಶ ಬ. ಪಂಚೇನವರ, ಶಾಲೆಯ ಮುಖ್ಯೋಪಾಧ್ಯರು ಪಿ. ಎಂ. ದಿಕ್ಷೀತ, ಶಿಕ್ಷಕರಾದ…

Read More

ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಹಾಗೂ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ರಸ್ತಾ ರೋಖೊ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ನ್ಯಾಷನಲ್ ಹೂಮನ್ ರೈಟ್ಸ್ ಮತ್ತು ಶಬರಿ ಎಕ್ಷಪ್ರೆಸ್ ರೈಲು ಹೋರಾಟ ಸಮಿತಿ ರಾಮದುರ್ಗ, ಕರ್ನಾಟಕ ರಕ್ಷಣಾ ವೇದಿಕೆ  ಹಾಗೂ ವಿವಿಧ ಸಂಘಟನೆ ಗಳಿಂದ ಮಿನಿ ವಿಧಾನಸೌಧ ಎದುರುಗಡೆ ಅಂಬೇಡ್ಕರ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಬಿ ಯು ಬೈರಕದಾರ, ರಾಜೇಶ್ವರಿ ಮೆಟಗುಡ್ಡ ವಕೀಲರು  ಮಾತನಾಡಿ ನ್ಯಾಷನಲ್ ಹೂಮನ್ ರೈಟ್ಸ್ ಮತ್ತು ಶಬರಿ ಎಕ್ಷಪ್ರೆಸ್ ರೈಲು ಹೋರಾಟ ಸಮಿತಿ ರಾಮದುರ್ಗ…

Read More