ಜಿ.ಪಂ., ತಾಪಂ. ಅನುದಾನ ಬಳಸಿಕೊಂಡು ಜುಲೈ 15 ರೊಳಗೆ ಎಲ್ಲ ಶಾಲಾ ಕೊಠಡಿ ದುರಸ್ತಿ ಮಾಡಿ, ಜಿ.ಪಂ. ಸಿಇಓ ಭುವನೇಶ ಪಾಟೀಲ
ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಮಕ್ಕಳ ಪಾಠಕ್ಕೆ ತೊಂದರೆ ಉಂಟಾದರೆ ಆಯಾ ತಾಲೂಕಿನ ಬಿಇಓ, ಡಿಡಿಪಿಐ ಅವರನ್ನು ಜವಾಬ್ದಾರಿಗೊಳಿಸಿ, ಕ್ರಮಕೈಗೊಳ್ಳಲಾಗುವುದು. ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ, ವಾಸ್ತವಿಕ ವರದಿ ಪಡೆದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶಾಲಾ ಕಟ್ಟಡಗಳ ಕಾಮಗಾರಿ ಹಾಗೂ ಕೊಠಡಿಗಳ ದುರಸ್ತಿ ಕುರಿತು ಶಿಕ್ಷಣ ಇಲಾಖೆ ಹಾಗೂ ವಿವಿಧ ಅನುಷ್ಠಾನ ಏಜನ್ಸಿಗಳ…
