ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೂನ್ಯ ಸಾಧನೆ ಮಾಡಿದ 6 ಶಾಲೆಗಳ ಬಗ್ಗೆ ಸರಕಾರಕ್ಕೆ ವರದಿ; ಸೂಕ್ತ ಕ್ರಮ: ಜಿ.ಪಂ.ಸಿಇಓ ಭುವನೇಶ ಪಾಟೀಲ
ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸಾಧನೆಯಲ್ಲಿ ಕಳಪೆ ಸಾಧನೆ ಮಾಡಿದ 106 ಶಾಲೆಗಳಿಗೆ ತಕ್ಷಣ ಶೋಕಾಸ್ ನೋಟಿಸ್ ನೀಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಆದೇಶಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.50 ಕ್ಕಿಂತ ಕಡಿಮೆ ಫಲಿತಾಂಶ ಮಾಡಿರುವ ಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ಜರುಗಿಸಿ, ಮಾತನಾಡಿದರು. ಶಿಕ್ಷಕ ವೃತ್ತಿ ಉಳಿದ ವೃತ್ತಿಗಳಿಗಿಂತ ಶ್ರೇಷ್ಠವಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಜಿಲ್ಲೆಯ ಆರು ಶಾಲೆಗಳು ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…
