ರಾಮದುರ್ಗ ಬೀದಿ ದೀಪ ಅಳವಡಿಸದೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ.
ರಾಮದುರ್ಗ ಪಟ್ಟಣದಲ್ಲಿ ಬೀದಿ ದೀಪಗಳು ಹೋದರೂ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕತ್ತಲೆಯಾಗುತ್ತಿದ್ದಂತೆ ರಸ್ತೆಗಳಲ್ಲಿ ಓಡಾಡಲು ಮಹಿಳೆಯರು ಮತ್ತು ಮಕ್ಕಳು ಪರದಾಡುವಂತಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಾರ್ಡ ನಂಬರ್ 24ಪ್ರಮುಖ ರಸ್ತೆ, ಹಾಗೂ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳು ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುತ್ತಾರೆ.ಬೆಳಕಿನ ವ್ಯವಸ್ಥೆ ಕಲ್ಪಿಸಬೇಕಾದ ಪುರಸಭೆ ಅಧಿಕಾರಿಗಳು ಇತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ವಾರ್ಡ್ ನಂಬರ 24ರ ನಿವಾಸಿಗಳು ಆರೋಪ. ವಿದ್ಯುತ್ ಕಂಬಗಳಿದ್ದರೂ ಬೆಳಕಿನ ವ್ಯವಸ್ಥೆ ಇಲ್ಲ…
ಗದಗ ಸಾವಯವ ಕೃಷಿಕರ ಸಮ್ಮೇಳನ ಕಾರ್ಯಕ್ರಮ.
ಗದಗ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಶ್ರೀ ದೇವರೆಡ್ಡಿ ಅಗಸನಕಪ್ಪ ರವರ ಕೃಷಿ ಆಶ್ರಮದಲ್ಲಿ ಪೂಜ್ಯ ಶ್ರಿ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿ ಕಣೇರಿ ಮಠ ಕೊಲ್ಹಾಪುರ್ ಹಾಗೂ ಕಪ್ಪತ್ ಗುಡ್ಡ ಶ್ರೀ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಿದ ರೈತರ ಸಮಾವೇಶದಲ್ಲಿ ಪೂಜ್ಯರೊಂದಿಗೆ ಶ್ರೀ ಬಾಲಚಂದ್ರ ಜಾಬಶೆಟ್ಟಿ ಅವರು ಕಪ್ಪತ್ ಗುಡ್ಡದ ಮಡಿಲಲ್ಲಿರುವ ಔಷಧಿ ಸಸ್ಯಗಳ ಸಂಗ್ರಹಕಾರ್ತಿ ಮತ್ತು ಪಾರಂಪರಿಕ ವೈದ್ಯೆ ಕಸ್ತೂರಿ ಅಮ್ಮನವರು ಸಂಗ್ರಹಿಸಿ ಪ್ರದರ್ಶಿಸುತ್ತಿರುವ ಮಳಿಗೆಗೆ ಭೇಟಿ ನೀಡಿದ…
ಧಾರವಾಡ ಜಿಲ್ಲಾ ಪೊಲೀಸರಿಂದ ಜಪ್ತ ಮಾಡಲಾದ 03 ಪ್ರಕರಣದಲ್ಲಿನ49 ಕೆ.ಜಿ 950 ಗ್ರಾಂ. ಗಾಂಜಾ ನಾಶ
ಧಾರವಾಡ ಅಂತಾರಾಷ್ಟ್ರೀಯ ಮಾದಕ ದ್ರವ್ಯ ದಿನಾಚರಣೆ ಪ್ರಯುಕ್ತ ಪ್ರಧಾನ ಕಛೇರಿ ಬೆಂಗಳೂರು ಅವರ ನಿದರ್ಶನದಂತೆ ಧಾರವಾಡ ಜಿಲ್ಲೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಮಾದಕ ವಸ್ತುಗಳನ್ನು ನಾಶಪಡಿಸುವ ಸಲುವಾಗಿ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ “ ಔಷಧ ವಿಲೇವಾರಿ ” ಸಮಿತಿಯ ಅಧಿಕಾರಿಗಳು ಜೂನ್ 17, 2026 ರಂದು ಸಭೆ ನಡೆಸಿ ಚರ್ಚಿಸಿ ತೀರ್ಮಾನಿಸಿದರು. ಅದರಂತೆ ಇಂದು (ಜೂ.25) ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2025 ಮತ್ತು 2026…
ಸವದತ್ತಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆ.
ಬೆಳಗಾವಿ ಜಿಲ್ಲೆ ಸವದತ್ತಿ ನಗರದ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ತಾಲೂಕು ಶೇ.100.39 ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಈ ಬಾರಿ ಕೂಡ ಅದೇ ಉತ್ಸಾಹ ಮತ್ತು ಜವಾಬ್ದಾರಿಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು. ಪತ್ರಿಕೆಗಳು,…
ರಾಷ್ಟ್ರಪಕ್ಷಿ ನವಿಲನ್ನು ಹಲಾಲ್ ಮಾಡಿ ಮಾಂಸ ಮಾರುತ್ತಿದ್ದ ಖದೀಮ ಅರೆಸ್ಟ್!
ಭಾರತದ ಹೆಮ್ಮೆಯ ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ, ಹಲಾಲ್ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಭೀಕರ ದಂಧೆಯೊಂದನ್ನು ಬೆಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ! ಈ ಅಮಾನವೀಯ ಕೃತ್ಯ ಎಸಗುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿ, ಆತನ ಬಳಿಯಿದ್ದ ನವಿಲಿನ ಮಾಂಸ ಹಾಗೂ ಮೊಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ ಈ ಕರಾಳ ದಂಧೆ ರಾಜಾರೋಷವಾಗಿ ನಡೆಯುತ್ತಿತ್ತು. ಸಾದೀಕ್ ಪಾಷ ಬಂಧಿತ ಆರೋಪಿ. ಈತ ಕಾಡಿನಿಂದ ನವಿಲುಗಳನ್ನು ಸೆರೆಹಿಡಿದು ತಂದು, ಅವುಗಳನ್ನು ಹಲಾಲ್…
ಎಇಇ ತಿಪ್ಪೇಸ್ವಾಮಿ ಬಳಿ ₹2.14 ಕೋಟಿ ಅಕ್ರಮ ಆಸ್ತಿ ಪತ್ತೆ, ಲೋಕಾಯುಕ್ತ ದಾಳಿ
ಬಳ್ಳಾರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವೆಶ್ಗಾರ ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿ ಸೇರಿ ಒಟ್ಟು 3 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದರು. ತಿಪ್ಪೇಸ್ವಾಮಿ ಅವರು ₹2.14 ಕೋಟಿಯಷ್ಟು ಅಕ್ರಮ ಆಸ್ತಿ ಹೊಂದಿದ್ದು, ಇದು ಅವರ ಕಾನೂನುಬದ್ಧ ಆದಾಯಕ್ಕಿಂತ ಶೇ 174.01ರಷ್ಟು ಅಧಿಕ ಎಂದು ತಿಳಿದುಬಂದಿದೆ. ಅವರ ಬಳಿ ಒಟ್ಟು…
ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರದ ಮಾರ್ಗಸೂಚಿ ಪ್ರಕಟ
ವಸತಿ ಕಟ್ಟಡಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ, ಅರ್ಜಿ ಸಲ್ಲಿಸಲು 15 ದಿನ ಅವಕಾಶ ಬೆಂಗಳೂರು: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು ಬಾರಿಯ ಕ್ರಮವಾಗಿ ವಿನಾಯಿತಿ ನೀಡಿ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿನಡೆದಿದ್ದ ಸಚಿವ ಸಂಪುಟ ಸಭೆಯ ನಿರ್ಣಯದಂತೆ…
ರಾಯಚೂರು ಭ್ರಷ್ಟಾಚಾರ ನಿವಾರಣೆಗಾಗಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ. ಇದರಡಿ ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿ ಕರ್ತವ್ಯವಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಹೇಳಿದರು.
ರಾಯಚೂರು ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಶನಿವಾರದಂದು ರಾಯಚೂರು ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮಕ್ಕೆಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ಚಾಲನೆ ನೀಡಿ ಅವರು ಮಾತನಾಡಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿಗಳ ವೈಯಕ್ತಿಕ ಮಾಹಿತಿ ನೀಡಲು…
ಸವದತ್ತಿ ಹತ್ತಿರ ಭೀಕರ ಅಪಘಾತ; ಚಲಿಸುತ್ತಿದ್ದ CNG ಕಾರಿನಲ್ಲಿ ಬೆಂಕಿ, ಪ್ರಶಾಂತ್ ಕಲಾದಗಿ ಪ್ರಾಣಾಪಾಯದಿಂದ ಪಾರು!
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಸಿಎನ್ಜಿ (CNG) ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.ಕಾರಿನಲ್ಲಿದ್ದ ರಾಮದುರ್ಗ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ಕಲಾದಗಿ ಅವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪ್ರಶಾಂತ್ ಅವರು ರಾಮದುರ್ಗದಿಂದ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಹೋಗುವ ಸಂಧರ್ಭ ತನ್ನ ಸ್ವಂತ ಕಾರು ರಿಪೇರಿಗೆ ಅಂತಾ ಹುಬ್ಬಳ್ಳಿಯಲ್ಲಿ ಬಿಟ್ಟು ಬೆಂಗಳೂರುಗೆ ಟ್ರೇನಿಂಗ್ ಅಂತಾ ಹೋಗಿದ್ದರು ಟ್ರೇನಿಂಗ್ ಮುಗಿಸಿಕೊಂಡು ಬರುವ ಸಂಧರ್ಭ ಹುಬ್ಬಳ್ಳಿಯಲ್ಲಿದ್ದ…
ಕಾಗವಾಡ ಪೊಲೀಸರಿಂದ ಅಂತರಾಜ್ಯ ಕಳ್ಳರ ಬಂಧನ
ಬೆಳಗಾವಿ ಜಿಲ್ಲೆ ಕಾಗವಾಡ ಪೊಲೀಸ್ ಠಾಣೆಗೆ ಶ್ರೀಮತಿ ಚೆನ್ನವ್ವಾ ಗಂಡ ರಾಮು ಬಹುರುಪಿ ಸಾ:-ಸಂಕೊನಟ್ಟಿ, ತಾ:-ಅಥಣಿ ಇವರು ಠಾಣೆಗೆ ಹಾಜರಾಗಿ ದಿನಾಂಕ: 19-01-2026 ರಂದು ಪಿರ್ಯಾದಿಯನ್ನು ಕೊಟ್ಟಿದ್ದು ಅದರಲ್ಲಿ ದಿನಾಂಕ: 18-01-2026 ರಂದು 12-30 ಗಂಟೆಯ ಸುಮಾರಿಗೆ ಮಂಗಸೂಳಿ ಗ್ರಾಮದ ಬಸಸ್ಟ್ಯಾಂಡದಲ್ಲಿ ಬಸ್ಸಿನಲ್ಲಿ ಇರುವಾಗ ಯಾರೋ ಕಳ್ಳರು ಪಿರ್ಯಾದಿಯವರ ಕೊರಳಲ್ಲಿ ಧರಿಸಿರುವ 12 ಗ್ರಾಂ ತೂಕದ ಬಂಗಾರದ ತಾಳಿ ಅಕಿ= 1.20.000/-ರೂ ಕಿಮ್ಮತ್ತಿನ ಆಭರಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಅವರ ಮೇಲೆ ನನ್ನದು ಪಿರ್ಯಾದಿ ಇದ್ದು ಮುಂದಿನ…
