BREAKING NEWS

ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ಬೆಳಗಾವಿಯಲ್ಲಿ ಆ.6 ರಂದು ಬೃಹತ್ ಪ್ರತಿಭಟನೆ

ಬೆಟಗೇರಿ:ಮುಡಾ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೆಸರು ತಳಕು ಹಾಕಿದ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಬೆಳಗಾವಿ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಸಹಯೋಗದಲ್ಲಿ ಬೆಳಗಾವಿ ಮಹಾನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಆಗಸ್ಟ್ ೬ ರಂದು ಮುಂಜಾನೆ ೧೧ಗಂಟೆಗೆ ಬಿಜೆಪಿ ಪಕ್ಷದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳÀ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹಾಗೂ…

Read More

ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನೀಲಪ್ಪ ಕೇವಟಿ ಅವರನ್ನು ಗಣ್ಯರು ಅಭಿನಂದಿಸಿದರು.

ಬೆಟಗೇರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಮಹಾಂತಪ್ಪ ಶಿವನಮಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೀಲಪ್ಪ ಕೇವಟಿ ಅವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ನೀಲಪ್ಪ ಬಾಳಪ್ಪ ಕೇವಟಿ ಅವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ್ ಪಾಟೀಲ ತಿಳಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಉಪಾಧ್ಯಕ್ಷರಾದ…

Read More

ಏರ್ಟೆಲ್ ಹಾಗೂ ಜಿಯೋ ಟವರಗಳನ್ನು ತೆರೆವುಗೊಳಿಸಬೇಕೆಂದು ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಈ ಟಿ ಓಣಿಯ ಐಸಿಐಸಿಐ ಬ್ಯಾಂಕ್ ಹಿಂದೆ ಇರುವ ಏರ್ಟೆಲ್ ಹಾಗೂ ಜಿಯೋ ಟವರ್ ತೆರೆವುಗೊಳಿಸಬೇಕೆಂದು ಶುಕ್ರವಾರ ಜನಪರ ಟ್ರಸ್ಟ್ ಅಧ್ಯಕ್ಷರಾದ ಸುಭಾಷ್ ಗೊಡ್ಕೆ ಹಾಗೂ ಅವರ ಬೆಂಬಲಿಗರಿಂದ ಪ್ರತಿಭಟನೆ ಮಾಡಿ ಜಿಯೋ ಟವರ್ ಹಾಗೂ ಏರ್ಟೆಲ್ ಟವರ್ ಇರುವ ಜಾಗವನ್ನು ಮುತ್ತಿಗೆ ಹಾಕಲಾಯಿತು. 20 ವರ್ಷಗಳಿಂದ ಈ ಟವರಗಳನ್ನು ನಿರ್ಮಾಣ ಮಾಡಿದ್ದಾರೆ ಜಿಯೋ ಹಾಗೂ ಏರ್ಟೆಲ್ ಲೀಜ ಮುಗಿದರು ಇದನ್ನು ತೆರೆವುಗೊಳಿಸದೆ ಟವರ್ ಅಕ್ಕ ಪಕ್ಕ ಇದ್ದಂತಹ ಮನೆಯವರಿಗೆ ಇದರಿಂದ…

Read More

ವಿಶ್ವ ಅರಣ್ಯ ರಕ್ಷಕರ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ.

ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್‌ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಡಾ.ಸಂಜಯ್ ಬಿಜ್ಜೂರ್ ಚಾಲನೆ ನೀಡಿ ಅವರು ಮಾತನಾಡಿದರು.ದೇಶವು ಪ್ರಗತಿ ಪಥದಲ್ಲಿ ಸಾಗಬೇಕಾದರೆ ನೈಸರ್ಗಿಕ ಸಂಪನ್ಮೂಲ ಅವಶ್ಯಕವಾಗಿದೆ. ದೇಶ ಹಾಗೂ ಮಾನವ ಸಂಪನ್ಮೂಲವನ್ನು ಪ್ರಾಣ ಪಣಕಿಟ್ಟು ಯಾರು ಉಳಿಸಿಕೊಳ್ಳುತ್ತಾರೋ ಅವರನ್ನು ಅರಣ್ಯ ರಕ್ಷಕ ಎಂದು ಕರೆಯಲಾಗುತ್ತದೆ. ಯಾವ ದೇಶ ನೈಸರ್ಗಿಕ ಸಂಪನ್ಮೂಲಗಳ…

Read More

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿಂದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ…

Read More

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಉದ್ಘಾಟಿಸಿ ಅವರು ಮಾತನಾಡಿದರು.ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆ.01 ರಂದು ಜನಿಸಿದರು. ತಮ್ಮ 10 ನೇ ವಯಸ್ಸಿನಲ್ಲಿ ಸವದಿಯ…

Read More

ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್

ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿ ಎಸ್ ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮೂಲಭೂತ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿಯ ವಾರ್ಷಿಕ ನಿಧಿಯಲ್ಲಿ ಶೇ.25 ರಷ್ಟು ಹಣಕಾಸು ವಿನಿಯೋಗಿಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.2023-24ರ ಆರ್ಥಿಕ ವರ್ಷದಲ್ಲಿ…

Read More

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ : ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

ಸವದತ್ತಿಯ ನವಿಲುತೀರ್ಥದ ಸುಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ನಡೆದ ಮಲಪ್ರಭಾ ಯೋಜನೆಯ 2024-25 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ವಹಿಸಿ ಮಾತನಾಡಿದರು. ಪ್ರತಿ ತಿಂಗಳು ಅಗತಕ್ಕೆ ತಕ್ಕಂತೆ ಯೋಜನೆ ರೂಪಿಸಿ, ಹಳ್ಳ, ಕೆನಾಲ್ ಗಳಿಗೆ ನೀರು ಬಿಡುಗಡೆಗೆ ಅಧಿಕಾರಿಗಳ ಕ್ರಮ ವಹಿಸಬೇಕು. ಕುಡಿಯುವ ನೀರು ಪೂರೈಕೆ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟ,…

Read More

ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್

ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಗಂಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಗಸ್ಟ್ ನಲ್ಲಿ ಮಳೆಯ…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

ಬೆಳಗಾವಿ, ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬೆಳಗಾವಿ ನಗರದ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಮಾತನಾಡಿದರು….

Read More