ಧಾರವಾಡ 70 ನೇ ಕರ್ನಾಟಕ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ನೆರವೇರಿಸಿದರು.
ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70 ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣವನ್ನು ಕಾರ್ಮಿಕ ಇಲಾಖೆ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ನೇರವೇರಿಸಿ, ಜಿಲ್ಲೆಯ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು. ನಮ್ಮ ಧ್ವಜ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣವು ನಮ್ಮ ರಾಜ್ಯದ ಶಕ್ತಿ, ಶೌರ್ಯ ಮತ್ತು ಸಾಂಸ್ಕøತಿಕ ಹೆಮ್ಮೆಯನ್ನು ತಿಳಿಸುತ್ತದೆ. ನಾಡಿನ ಭಾಷಯಾದ ಕನ್ನಡವು ನಮ್ಮ ಸಂಸ್ಕøತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುತ್ತದೆ. ಕನ್ನಡ ಭಾಷಯು ಸುಮಾರು 2500…
