ಬಲಿಷ್ಠ ದೇಶ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಹುಮುಖ್ಯ: ಸಚಿವ ಮಧು ಬಂಗಾರಪ್ಪ
ಬೆಳಗಾವಿಯಲ್ಲಿ ನಡೆಸಲಾಗುತ್ತಿರುವ ಪ್ರತಿಭಾನ್ವೇಷಣೆ ಪರೀಕ್ಷೆಯು ರಾಜ್ಯದಲ್ಲಿ ಮಾದರಿಯಾಗಿದ್ದು, ಇದೇ ರೀತಿ ರಾಜ್ಯಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ ಏರ್ಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ, ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ನಡೆದ ಪ್ರತಿಭಾನ್ವೇಷಣೆ ಪರೀಕ್ಷೆ-2025ರ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದರು. ತಂದೆ ತಾಯಿಗಳ ಆಶಯದಂತೆ ಮಕ್ಕಳು ದೇಶಕ್ಕೆ…
