ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.
ಚಿಕ್ಕಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದ ಅವರು ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.ಸರ್ಕಾರದ ನಿರ್ದೇಶನದನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ ರೂ. 12,೦೦೦ಗಳನ್ನು ನಿಗಧಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ…
