BREAKING NEWS

ಖಾನಾಪುರದ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಸಿಬ್ಬಂದಿ, ಮೂಲಸೌಕರ್ಯ ಹಾಗೂ ವೈದ್ಯಕೀಯ ಉಪಕರಣಗಳನ್ನು ಸರಕಾರ ಒದಗಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಖಾನಾಪೂರ ಪಟ್ಟಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಎಚ್ಚ್.ಎಂ) ಅಡಿಯಲ್ಲಿ ನಿರ್ಮಿಸಲಾದ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟಸಿದ ಬಳಿಕ ನಬಾರ್ಡ ಆರ್.ಐಡಿಎಫ್-30 ಯೋಜನೆಯಡಿಯಲ್ಲಿ 100 ಹಾಸಿಗೆಗಳ ತಾಲೂಕಾ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ನೆರವೇರಿಸಿ ಮಾತನಾಡಿದರು. ಖಾನಾಪುರದ…

Read More

ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ವಹಿಸಿ ಅವರು ಮಾತನಾಡಿದರು. ಸರಕಾರಿ ಶಾಲಾ ಮಕ್ಕಳು ನಿಯಮಿತವಾಗಿ ಶಾಲೆಗೆ ಹಾಜರಾಗುವಂತಂಹ ಪೂರಕ ವಾತಾವರಣ ನಿರ್ಮಿಸಲು ಶಾಲಾ ಶಿಕ್ಷಕರು, ಅಧಿಕಾರಿಗಳು ಕ್ರಮ‌‌ ವಹಿಸಬೇಕು. ಈ ಕಾರ್ಯದಲ್ಲಿ ಎಸ್.ಡಿ.ಎಂ.ಸದಸ್ಯರೊಂದಿಗೆ ಸಮನ್ವಯ ಸಾಧಿಸಿ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು. ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಆಗುತ್ತಿರುವದಕ್ಕೆ ಕಾರಣಗಳನ್ನು‌ ಹುಡುಕಿ ಅವುಗಳ ಪರಿಹಾರಕ್ಕೆ ಕ್ರಮಗಳನ್ನು…

Read More

ಬೀದಿ ನಾಯಿಗಳ ಸರ್ವೆ 15 ದಿನಗಳಲ್ಲಿ ಆರಂಭಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ವಹಿಸಿ ಅವರು ಮಾತನಾಡುತ್ತಿದ್ದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆಯು ಸರಕಾರೇತರ ಸಂಘ ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿತ ಕಾರ್ಯಾಚರಣೆ ವಿಧಾನ ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕೆಂದು ಅವರು ಸೂಚಿಸಿದರು. 2018 ರ ಸಮೀಕ್ಷೆ ಪ್ರಕಾರ ಅವಳಿನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ…

Read More

ಅಕಮ ಗಾಂಜಾ ಮಾರಾಟ ಮಾಡುತ್ತಿದ್ದಇಬ್ಬರ ಬಂಧನ

ಬಳ್ಳಾರಿ ಅಕ್ರಮವಾಗಿ ಗಾಂಜಾಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹಾಗೂ 2 ಲಕ್ಷಮೌಲ್ಯದ ಗಾಂಜಾ ಸಹಿತ ನಗರದ ಕೌಲ್ ಬಜಾರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ನಲ್ಲ ಚೇರುವು ಪ್ರದೇಶದ ಭಟ್ಟಿ ಏರಿಯಾದ ಆಂಜನೇಯಸ್ವಾಮಿ ದೇವಾಲಯ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಜಿಕಾರಿಯ ಮಾಜಿ ಮತ್ತು ಜಾನ್ ಅವರನ್ನು ವಶಕ್ಕೆ ಪಡೆದು ಅವರಿಂದ ರೂ 850 ಮತ್ತು 4310 ಗ್ರಾಂ ಅಂದಾಜು ಮೌಲ್ಯ 2 ಲಕ್ಷ ರೂಗಳ ಗಾಂಜಾವನ್ನು ವಶಪಡಿಸಿಕೊಂಡು…

Read More

ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ

ದಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿದರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ,…

Read More

ಬೆಳಗಾವಿ ಸ್ಥಳೀಯ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರ ಸಭೆಯನ್ನು ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಚಾಲನೆ ನೀಡಿದರು.

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಜರುಗಿದ ಸ್ಥಳೀಯ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರ ಸಭೆಯನ್ನು ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ ಅವರು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಆಫ್ರಿಕಾದಲ್ಲಿ ರೊವಾಂಡಾ ದೇಶ ಇ-ಕಾಮರ್ಸ್, ಇ-ಸರ್ವೀಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕ್ಷಿಪ್ರ ಪ್ರಗತಿ ಸಾಧಿಸುತ್ತಿದೆ.ದೇಶದಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶವಿಲ್ಲ; ವ್ಯಾಪಾರ-ವಹಿವಾಟು ನಡೆಸಲು ಅನುಕೂಲವಾಗುವಂತೆ ವ್ಯಾಪಾರ ಸ್ನೇಹಿ ವಾತಾವರಣವನ್ನು ದೇಶ ಹೊಂದಿದೆ.ಬಂಡವಾಳ ಹೂಡಿಕೆಗೆ ಅನುಕೂಲವಾಗುವಂತಹ ತೆರಿಗೆ ಪದ್ಧತಿ…

Read More

ಬೆಟಗೇರಿ ಸಕಲ ಶ್ರೀಗಳಿಂದ ನಡೆದ೪೦ನೇ ಸತ್ಸಂಗ ಸಮ್ಮೇಳನ

ಪ್ರತಿ ದಿನ ಸಂಜೆ ೭:೩೦ಕ್ಕೆ ಸಕಲ ಮಹಾತ್ಮರಿಂದ ಪ್ರವಚನ ದಾನಿಗಳಿಗೆ ಸತ್ಕಾರ ಮಹಾಪ್ರಸಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ೪೦ನೇ ಸತ್ಸಂಗ ಸಮ್ಮೇಳನ ಇದೇ ಸೆ. ೬ ರಿಂದ ಸೆ.೧೦ ತನಕಂ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ ೬ ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ.ಸೆ.೬ರಿಂದ ಸೆ.೮ರ ತನಕ ಸಂಜೆ ೭:೩೦ಕ್ಕೆ ನಾಡಿನ ಸಕಲ ಮಹಾತ್ಮರು, ಶರಣರು, ಹರ, ಗುರು, ಚರಮೂರ್ತಿಗಳಿಂದಂ, ಪ್ರವಚನ…

Read More

ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಇಲ್ಲಿಯ ಗ್ರಾಮದೇವಂತೆ ದ್ಯಾಮವ್ವದೇವಿ ದೇವಾಲಯ ಹತ್ತಿರ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು.ಸ್ಥಳೀಯ ವೇದಮೂರ್ತಿ ವಿಜಯ ಹಿರೇಮಠ ಗಣಪತಿ ಮೂರ್ತಿಗೆ ಪೂಜೆ-ಪುನಸ್ಕಾರ ನೆರವೇರಿಸಿದರು. ಸೆ.೭ರಿಂದ ಸತತ ೫ ದಿನಗಳ ಕಾಲ ಮುಂಜಾನೆ-ಸಂಜೆ ಸಮಯ ಪ್ರತಿಷ್ಠಾಪಿಸಿದ ಗಣೇಶನೆಗೆ ಪೂಜೆ-ಪುನಸ್ಕಾರ…

Read More

ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ; ಸಚಿವ ಸಂತೋಷ ಲಾಡ

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ…

Read More

ದಾರವಾಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.

ಧಾರವಾಡ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪ ನಿರ್ದೇಶಕರ ಕಾರ್ಯಾಲಯದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಜೃಷ್ಣನ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಉದ್ಘಾಟಿಸಿ, ಮಾತನಾಡಿದರು.ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು…

Read More