ನಾಟಕ ಅಕಾಡಮಿಗೆ ಹೆಸರು ತನ್ನಿ, ಈ ಭಾಗಕ್ಕೆ ಅವಕಾಶ ನೀಡಿ – ಜ್ಯೋತಿ ಮನವಿ
ಕೊಪ್ಪಳ : ಕಾಂಗ್ರೆಸ್ ಸರಕಾರದಲ್ಲಿ ಉತ್ತರ ಕರ್ನಾಟಕದ ಬಹುತೇಕ ಕವಿ, ಕಲಾವಿದ, ಸಾಹಿತಿ, ಚಿಂತಕರಿಗೆ ವಿವಿಧ ಅಕಾಡಮಿಗಳಲ್ಲಿ ಅವಕಾಶ ನೀಡುವ ಮೂಲಕ ಉತ್ತರ ಕರ್ನಾಟಕದ ಬಹುದಿನಗಳ ಆಸೆಗೆ ನೀರೆರೆದಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದ್ದಾರೆ.ಅವರು ನಗರದಲ್ಲಿ ನಾಟಕ ಅಕಾಡಮಿಗೆ ಸದಸ್ಯರಾಗಿ ನೇಮಕಗೊಂಡ ಸಮೀಪದ ಬಹೂದ್ದರಬಂಡಿ ಗ್ರಾಮದ ಹಿರಿಯ ರಂಗಕರ್ಮಿ, ಸಂಘಟಕ ಚಾಂದಪಾಶಾ ಕಿಲ್ಲೇದಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದರು.ಚಾಂದಪಾಶಾ ಕಿಲ್ಲೆದಾರ್ ಅವರು ೧೮ನೇ…
