ಬೆನಕನಹಳ್ಳಿ ಡೊಂಬರ ಕಾಲನಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ
ಬೆಳಗಾವಿ ಹಿಂಡಲಗಾ ರಸ್ತೆಯಲ್ಲಿರುವ ಬೆನಕನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಡೊಂಬರ ಕಾಲೋನಿಗೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಅಲ್ಲಿನ ಅವ್ಯವಸ್ಥೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಡೊಂಬರ ಕಾಲನಿಯ ಜನರಿಗೆ ಕೂಡಲೇ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದಿನನಿತ್ಯ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕು; ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು…
