ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಮಗ್ರ ಕನ್ನಡಿಗರ ಜಯಕ್ಕಾಗಿ ಕನ್ನಡಿಗರ ಹಿತಕ್ಕಾಗಿ ಕೋಲಾರದಲ್ಲಿ ಈಡುಗಾಯಿ ಹೊಡೆದ ಕನ್ನಡಪರ ಸಂಘಟನೆಗಳ ಮುಖಂಡರು..!
ಕೋಲಾರ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡಿಗರ ಹಿತಕ್ಕಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಈಡುಗಾಯಿ ಒಡೆಯುವ ಚುಳುವಳಿ ಪ್ರಯುಕ್ತ ನಗರದ ಕೋಲಾರಮ್ಮ ದೇವಾಲಯದಲ್ಲಿ ಈಡುಗಾಯಿ ಒಡೆದು ಕನ್ನಡಿಗರ ಜಯಕ್ಕಾಗಿ ಒತ್ತಾಯಿಸಲಾಯಿತು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಮುಖಂಡರು ಕೋಲಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆದು ಚಳುವಳಿ ಪ್ರಾರಂಭಿಸಿದರು. ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ ಅಖಂಡ ಕರ್ನಾಟಕದ ಕನ್ನಡಿಗರ…
