ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅತಿವೃಷ್ಠಿ/ಪ್ರವಾಹ ಉಂಟಾಗಿದ್ದು, ಹಾನಿಗೊಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣವೇ ಪರಿಹಾರ ಒದಗಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಬಗ್ಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಪೋರ್ಟಲ್ನಲ್ಲಿ ಹಾನಿ ಕುರಿತ ದತ್ತಾಂಶ ಅಳವಡಿಸಬೇಕು. ಜಿಲ್ಲೆಯಲ್ಲಿ ಸಂಪೂರ್ಣ…
