ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆ
ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ವಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳು ಹಾಗು ಸರ್ಕಾರದ ಯೋಜನೆಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಪೋಲಿಸ್ ಅಧಿಕಾರಿಗಳಾದ ಈರಸಂಗಪ್ಪ ಪಟ್ಟಣಶೆಟ್ಟಿ ಹಾಗೂ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು
