ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನೀಲಪ್ಪ ಕೇವಟಿ ಅವರನ್ನು ಗಣ್ಯರು ಅಭಿನಂದಿಸಿದರು.
ಬೆಟಗೇರಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ನೀಲಪ್ಪ ಬಾಳಪ್ಪ ಕೇವಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಮಹಾಂತಪ್ಪ ಶಿವನಮಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೀಲಪ್ಪ ಕೇವಟಿ ಅವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ನೀಲಪ್ಪ ಬಾಳಪ್ಪ ಕೇವಟಿ ಅವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ್ ಪಾಟೀಲ ತಿಳಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಉಪಾಧ್ಯಕ್ಷರಾದ…
