BREAKING NEWS

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ

ಬೆಂಗಳೂರು, ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ. ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ…

Read More

ಧಾರಡವಾಡದಲ್ಲಿ ಅಮೃತ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದಿಂದ ಅಮೃತ್ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ರಸ್ತೆ ಮತ್ತು ಧಾರವಾಡ ಸೇರಿದಂತೆ ದೇಶದಲ್ಲಿ 103 ಅಮೃತ್ ನಿಲ್ದಾಣಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ರಾಜ್ಯಪಾಲರು, ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023-24ನೇ ಸಾಲಿನಲ್ಲಿ ಅಮೃತ್ ರೈಲು ನಿಲ್ದಾಣ ಯೋಜನೆಯಡಿ 1000 ಕ್ಕೂ ಹೆಚ್ಚು ನಿಲ್ದಾಣಗಳ ಪುನರಾಭಿವೃದ್ಧಿ…

Read More

ಬಾಲ್ಯವಿವಾಹ ಮುಕ್ತ ಧಾರವಾಡ ಜಿಲ್ಲೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸೋಣ; ತಪ್ಪಿತಸ್ಥರಿಗೆ ವಿರುದ್ಧ ಕ್ರಮ ಜರುಗಿಸೋಣ: ಜಿಪಂ ಸಿಇಓ ಭುವನೇಶ ಪಾಟೀಲ

ಧಾರವಾಡ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 28 ಬಾಲ್ಯ ವಿವಾಹವನ್ನು ತಡೆಗಟ್ಟಿದ್ದಾರೆ. 18 ಎಫ್‍ಐಆರ್ ದಾಖಲಾಗಿವೆ. ಬಾಲ್ಯವಿವಾಹ ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ಸರಕಾರ ಮತ್ತು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು ಕೈಗೊಂಡಿವೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಬಾಲ್ಯವಿವಾಹ ಪದ್ಧತಿ ಕುರಿತು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು….

Read More

ಹಲಗತ್ತಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಲಲಿತಾ. ಲ. ಹೂಗಾರ, ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಆಯುಷ್ಮಾನ್ ಆರೋಗ್ಯ ಮಂದಿರ ಹಲಗತ್ತಿಯಡಾ. ಬಸಪ್ಪ.ಮಾನಪ್ಪನವರ ಮಾತನಾಡಿಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮನರೇಗಾ ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದ್ದು ಅದರ ಸದುಪಯೋಗ…

Read More

ಬೆಟಗೇರಿ:ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರು ಆಯ್ಕೆಯಾದರು.

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮಹಾದೇವ ಕಂಬಿ, ಉಪಾಧ್ಯಕ್ಷರಾಗಿ ಗಂಗವ್ವ ತೋಟಗಿ ಆಯ್ಕೆಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಶನಿವಾರ ಮೇ.೧೭ರಂದು ನಡೆದ ಸಂಘದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯಲ್ಲಿ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷö್ಮಣ ಚಂದರಗಿ ನೇತೃತ್ವದ ಗುಂಪಿನ ಸದಸ್ಯ ಮಹಾದೇವ ಚಂದ್ರಪ್ಪ ಕಂಬಿ ಅಧ್ಯಕ್ಷರಾಗಿ, ಉಪಾಧ್ಯಕ್ಷೆಯಾಗಿ ಗಂಗವ್ವ ಬಸಪ್ಪ ತೋಟಗಿ ಆಯ್ಕೆಯಾಗಿದ್ದಾರೆ.ಒಟ್ಟು ೧೨ ಸದಸ್ಯರ ಬಲ ಹೊಂದಿರುವ ಸಂಘ, ಅಧ್ಯಕ್ಷ ಸ್ಥಾನಕ್ಕೆ…

Read More

ಕೂಡ್ಲಿಗಿ: ಬಂಡಿ ಓಟದ ಸ್ಪರ್ಧೆ-ಪ್ರಥಮ ಸ್ಥಾನ ಪಡೆದ ಆಂದ್ರದ ಅನಂತಪುರ ಅಗಸ್ತ್ಯ ಭೀರ

ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ಮೇ 15 ರಂದು ಮತ್ತು ಮೇ 16 ರಂದು. ರೈತರಿಂದ ರೈತರಿಗಾಗಿ ರೈತರಿಗೋಸ್ಕರ…ಘೋಷ ವಾಕ್ಯದಡಿ. ಶ್ರೀಊರಮ್ಮ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ , ರೈತರ ಜೋಡಿ ಬೇಸಾಯ ಎತ್ತಿನ ಬಂಡಿ ಓಟ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ. ಪ್ರಥಮ ಸ್ಥಾನವನ್ನು ಆಂದ್ರದ ಅನಂತಪುರದ , ಅಗಸ್ತ್ಯ ಹಾಗೂ ಭಿರ ಜೋಡೆತ್ತುಗಳು ಪಡೆದು ಕೊಂಡವು. ಪಟ್ಟಣದ ವಾಲ್ಮೀಕಿ ಸಮುದಾಯದ ಯುವ ಮುಖಂಡ ಕುಸ್ತಿ ದುರ್ಗಣ್ಣ , ಹಾಗೂ ಸ್ನೇಹಿತರು ಮತ್ತು ಪಟ್ಟಣದ ಸಕಲ…

Read More

ಹೆಮ್ಮಡಗಾ ತಳೇವಾಡಿ ಅರಣ್ಯವಾಸಿಗಳ ಸ್ಥಳಾಂತರ, 27 ಕುಟುಂಬಕ್ಕೆ ಚೆಕ್ ವಿತರಣೆ

ಹೆಮ್ಮಡಗಾ (ಖಾನಾಪುರ), ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.ಮಾನವನ ಹಸ್ತಕ್ಷೇಪ ಇಲ್ಲದಿದ್ದರೆ ಅರಣ್ಯ ಸಮೃದ್ಧವಾಗಿ ಬೆಳೆಯುತ್ತದೆ. ಪ್ರಸಕ್ತ…

Read More

ಬೆಳಗಾವಿ-ಗೋವಾ ಮಾರ್ಗದ ರಸ್ತೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, ಖಾನಾಪೂರ-ಜಾಂಬೋಟಿ ಮಾರ್ಗದ ಅಂದಾಜು 50 ಕೋಟಿ ಅಧಿಕ ವೆಚ್ಚದ ಬೆಳಗಾವಿ-ಗೋವಾ ರಸ್ತೆ ದುರಸ್ಥಿ ಕಾಮಗಾರಿಯನ್ನು ಶನಿವಾರ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಪರಿಶೀಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಾಂಬೋಟಿ ಮಾರ್ಗದ ಬೆಳಗಾವಿ-ಗೋವಾ ರಸ್ತೆ ನಿರ್ಮಾಣಕ್ಕೆ ಕಳೆದ 10 ವರ್ಷಗಳಿಂದ ಬೇಡಿಕೆ ಇತ್ತು. ಅದರಂತೆ ಕೇಂದ್ರ ಸರ್ಕಾರದ ಮಂಜೂರಾತಿ ಪಡೆದುಕೊಂಡರು ನಿರ್ಧಿಷ್ಟ ಕಾಲಾವಧಿಯೊಳಗೆ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ ಎಂದರು. ಸುಮಾರು 50 ಕಿ.ಮೀ ಕ್ಕಿಂತ ಹೆಚ್ಚು ರಸ್ತೆ ದೂರಸ್ಥಿ…

Read More

ಮೇ 20 ರ ಸಾಧನ ಸಮಾವೇಶ ಯಶಸ್ವೀಗೊಳಿಸಿ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಮನವಿ

ವಿಜಯನಗರ ಜಿಲ್ಲೆ : ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ , ಮೇ 20 ರಂದು ಜರುಗಲಿರುವ. ಸಾಧನಾ ಸಮಾವೇಶದಲ್ಲಿ ಕ್ಷೇತ್ರದ ಜನತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗಿಯಾಗಿ , ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವೀಗೊಳಿಸಬೇಕೆಂದು. ಕ್ಷೇತ್ರದ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕ್ಷೇತ್ರದ ಜನತೆಗೆ ಹಾಗೂ ಸರ್ಕಾರದ ಪ್ರಯೋಜನಗಳನ್ನು ಪಡೆದವರಿಗೆ. ಮತ್ತು ಕಾಂಗ್ರೇಸ್ ಪಕ್ಷದ ಮುಖಂಡರಿಗೆ , ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಅವರು ಮೇ 17ರಂದು ಪಟ್ಟಣದ ಪ್ರವಾಸಿ ಮಂದಿರಲ್ಲಿ , ಪ್ರತಿಕಾಗೋಷ್ಠಿ…

Read More

ಬಯೋ ಮಾಸ್ ಬಾಯ್ಲರ್ ಸ್ಫೋಟ: 24 ಕಾರ್ಮಿಕರ ರಕ್ಷಣೆ

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಶುಕ್ರವಾರ ಆಟೋ ನಗರದ ಹಿಂಡಾಲ್ಕೋ ಕಾರ್ಖಾನೆಯಲ್ಲಿ ನಡೆಯಿತು. ಪ್ಯಾಕ್ಟರಿಗಳಲ್ಲಿ ಬಯೋ ಮಾಸ್ ಬಾಯ್ಲರ್ ಬೆಂಕಿ ಅವಘಡ ಸಂಭವಿಸಿದಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಹಾಗೂ ಅದರಿಂದಾಗುವ ಪರಿಣಾಮಗಳನ್ನು ತಗ್ಗಿಸುವ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತಾಗಿ, ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನವನ್ನು ಕೈಗೊಳ್ಳಲಾಯಿತು. ಬೆಳಗಾವಿ ತಹಶೀಲ್ದಾರ ಬಸವರಾಜ ನಾಗರಾಳ ಹಾಗೂ ಅಗ್ನಿ ಶಾಮಕ ದಳದ ಅಧೀಕ್ಷಕ…

Read More