BREAKING NEWS

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಜಾರಿ: ಕನ್ನಡಿಗರಿಗೆ ಸಿಕ್ಕ ಜಯ ಕನ್ನಡಮಿತ್ರ ವೆಂಕಟಪ್ಪ

ಕೋಲಾರ: ಖಾಸಗಿ ಕ್ಷೇತ್ರದ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿರುವುದು ಏಳು ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಹೇಳಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಮಸೂದೆ ಜಾರಿ ಮಾಡಲು ಮುಂದಾಗಿರುವ…

Read More

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿಯನ್ನು ಪಡೆದುಕೊಂಡರು. ನಂತರ ಸಂಕೇಶ್ವರ ಪಟ್ಟಣಕ್ಕೆ‌ ತೆರಳಿದ ಅವರು, ಸಂಭವನೀಯ ಪ್ರವಾಹದಿಂದ ಬಾಧಿತಗೊಳ್ಳಬಹುದಾದ ಪ್ರದೇಶಗಳನ್ನು ವೀಕ್ಷಿಸಿದರು.ಕಳೆದ ಬಾರಿ ಪ್ರವಾಹ ಬಂದಾಗ‌ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅವರು, ಸಂಭವನೀಯ…

Read More

ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಜಲಮೂಲಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪಿಡಿಓ ಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಹೇಳಿದರು. ವಿವಿಧ ತಾಲ್ಲೂಕುಗಳಿಗೆ…

Read More

ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ನಿಯಂಯ್ರಣಕ್ಕೆ ಅಗತ್ಯದ ಎಲ್ಲ ಕ್ರಮಗಳನ್ನು ಜರುಗಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ತಾಲೂಕು ಪಂಚಾಯತ ಹಾಗೂ ಇತರ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಜೊತೆಗೆ ತಾಲೂಕು ಪಂಚಾಯತಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದರು. ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ…

Read More

ಗ್ರಾಮ ಪಂಚಾಯಿತ ಗ್ರಂಥಪಾಲಕರಿಗೆ ಸ್ಮಾರ್ಟಪೋನ್‌ಗಳನ್ನು ತಾ.ಪಂ ಇಓ ಪ್ರವೀಣಕುಮಾರ ಸಾಲಿ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯಿತ ಸಭಾಭವನದಲ್ಲಿ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ಮತ್ತು ಡೆಲ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ತಾಲೂಕು ಪಂಚಾಯಿತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಂಥಪಾಲಕರು ಗ್ರಂಥಾಲಯಗಳಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಗ್ರಂಥಾಲಯಗಳನ್ನು ಜ್ಞಾನ ಭಂಡಾರ ಕೇಂದ್ರಗಳಂತೆ ನಿರ್ಮಾಣ ಮಾಡಬೇಕು….

Read More

ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ ಪಟ್ಟಣ ಅವರು ಉಚಿತ ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಶಾಲೆಯ ಎರಡು ಸ್ಮಾರ್ಟ್ ಕ್ಲಾಸ್, ಎರಡು ಹೈಟೆಕ್ ನಲಿಕಲಿ ತರಗತಿ ಉದ್ಘಾಟನೆ, ಪಿಎಂಶ್ರೀ ಯೋಜನೆಯ ವಿವಿಧ ಚಟುವಟಿಕೆಗಳಿಗೆ ಚಾಲನೆ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮದೇ ಖರ್ಚಿನಿಂದ ಉಚಿತ ನೋಟಬುಕ್ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ವಿತರಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿ ಎಂಬ ಸದುದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು…

Read More

ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭವಾನಿ ನಗರದಲ್ಲಿ ನಿರ್ಮಿಸಲಾದ ನೂತನ ಮರಾಠಾ ಅರ್ಬನ್ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸೋಸೈಟಿಯ 24 ನೇ ವಾರ್ಷಿಕೋತ್ಸವ ಸಮಾರಂಭವನ್ನು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ ಉದ್ಘಾಟಿಸಿ ಅವರು ಮಾತನಾಡಿದರು. ರಾಮದುರ್ಗ ನಗರದಲ್ಲಿ 24 ವರ್ಷಗಳ ಹಿಂದೆ ಮರಾಠಾ ಸೊಸೈಟಿಯನ್ನು ಆರಂಭಿಸಿ ಇಂದು ಎರಡು ಉಪ ಶಾಖೆಗಳೊಂದಿಗೆ ಸಾಕಷ್ಟು ಜನರ ಆರ್ಥಿಕ ವಲಯ ಸುಧಾರಣೆಗೆ ಮುಂದಾಗಿದೆ. ಅಲ್ಲದೇ ಸ್ವಂತ ಕಟ್ಟಡದಲ್ಲಿ ಇಂದು ಕಾರ್ಯ ನಿರ್ವಹಿಸುತ್ತಿರುವುದು…

Read More

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಬರ ಪರಿಹಾರ ನೀಡಲು ತಹಸೀಲ್ದಾರ್ ಇವರಿಗೆ ಮನವಿ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯಾಧ್ಯಕ್ಷರು ಚೂನಪ್ಪ ಪೂಜೇರ ಇವರ ನೇತೃತ್ವದಲ್ಲಿ ರೈತರ ಖಾತೆಗೆ ಬರ ಪರಿಹಾರ ನೀಡಬೇಕೆಂದು ಪ್ರತಿಭಟನೆ ಮೂಲಕ ತಹಶೀಲ್ದಾರ್ ಇವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಜಗದೀಶ ದೇವರಡ್ಡಿ ಮಾತನಾಡಿ ರಾಮದುರ್ಗ ತಾಲೂಕನ್ನುಸಂಪೂರ್ಣ ಬರಗಾಲ ಪಿಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಕೂಡಾ ತಾಲೂಕಿನ ರೈತರಿಗೆ ಸಂಪೂರ್ಣ ಬರ ಪರಿಹಾರ ಬಂದಿರುವುದಿಲ್ಲ. ಎಲ್ಲ ರೈತರಿಗೆ ಶೀಘ್ರ…

Read More

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜಗದೀಶ ಶೆಟ್ಟರ ಅವರಿಗೆ ಜುಲೈ-12 ರಂದು ಸಂಜೆ 4 ಗಂಟೆಗೆ ತುರನೂರ ಶ್ರೀ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂಧನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರು, ಜಿಲ್ಲೆಯಿಂದ ಭಾರತೀಯ ಜನತಾ ಪಕ್ಷದ ಮತದಾರರು 1.80 ಲಕ್ಷ ಅಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ತಾಲೂಕು ಸೇರಿದಂತೆ ಲೋಕಸಭಾ ಕ್ಷೇತ್ರದ ಮತದಾರರು ಶ್ರಮಿಸಿದ್ಧಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತ ಇದ್ದರೂ ಜನತೆ 17 ಬಿಜೆಪಿ ಹಾಗೂ 2 ಜೆಡಿಎಸ್ ಸಂಸದರನ್ನು ಆಯ್ಕೆ ಮಾಡಿ 28 ರಲ್ಲಿ 19 ಕ್ಷೇತ್ರಗಳಿಂದ ಪಕ್ಷದ…

Read More

ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು. ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ರಂದು ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ…

Read More