ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಇಒ ಪ್ರವೀಣಕುಮಾರ ಸಾಲಿ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಳೆತೊರಗಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗನೂರ ಗ್ರಾಮದಲ್ಲಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಚಾಲನೆ ನೀಡಿ ಅವರು ಮಾತನಾಡಿದರು.ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗಾಗಿ ಇಲಾಖೆಯಿಂದ ಸಿಗುವ ಅನುಕೂಲ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು. ಕೂಲಿ ಕಾರ್ಮಿಕರು ಸರಕಾರದ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಹೇಳಿದರು.ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರ್ಮೀಕರು…
