ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಾಂಬೋಟಿ ರಸ್ತೆಯ ಕುಸುಮಳ್ಳಿ ಸೇತುವೆ, ವೀಕ್ಷಿಸಿ, ಬಳಿಕ ಖಾನಾಪುರದಿಂದ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮದ್ಯದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು ಸಚಿವರನ್ನು ಭೇಟಿ ಮಾಡಿ ಮಾತನಾಡಿದರು ಪ್ರತಿವರ್ಷ ಮಳೆಗಾಲದಲ್ಲಿ…
