BREAKING NEWS

ಸವದತ್ತಿ ರಾಷ್ಟ್ರೀಯ ಲೋಕ್‍ ಅದಾಲತ್ ದಲ್ಲಿ 1475 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 12-07-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.

Read More

ಛಾಯಾಗ್ರಾಹಕರಿಗೆ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ

ದಾವಣಗೆರೆ ಯಲ್ಲಿ ನಡೆದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್ ರಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮನು.ಎಂ. ದೇವನಗರಿ ಇವರಿಗೆ ದಾವಣಗೆರೆ ಜಿಲ್ಲೆಯ ಸಮಸ್ತ ಫೋಟೋಗ್ರಾಫರ್ ಗಳ ಹಾಗೂ ವೃತ್ತಿಬಾಂಧವರ ಪರವಾಗಿ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ನೀಡಿದರು. ಈ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರ ಇಲಾಖೆಗೆ ಸೇರ್ಪಡೆ ಮಾಡಿದ್ದಕ್ಕಾಗಿ ಸಚಿವರಿಗೆ ರಾಜ್ಯದ ಸಮಸ್ತ ಛಾಯಾಗ್ರಾಹಕರ ಪರವಾಗಿ…

Read More

ಸವದತ್ತಿಯ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ 2025ರ ಏಪ್ರಿಲ್ 1ರಿಂದ ಜೂನ್ 30ರ ಅವಧಿಯಲ್ಲಿ ಭಕ್ತರು ಹುಂಡಿಗೆ ಹಾಕಿದ್ದ ಹಣ, ಚಿನ್ನಾಭರಣ, ಬೆಳ್ಳಿ ಆಭರಣಗಳ ಎಣಿಕೆ 2023ರಲ್ಲಿ ಇದೇ ಅವಧಿಯಲ್ಲಿ 1.65 ಕೋಟಿ, 2024ರಲ್ಲಿ ಈ ಅವಧಿಯಲ್ಲಿ 1.96 ಕೋಟಿ ಕಾಣಿಕೆ ಸಂಗ್ರಹವಾಗಿತ್ತು ಈ ಬಾರಿ ದುಪ್ಪಟ್ಟು ಕಾಣಿಕೆ ಸಂಗ್ರಹವಾಗಿದೆ 3.81 ಕೋಟಿಯಲ್ಲಿ 3.39 ಕೋಟಿ ನಗದು, 32.94 ಲಕ್ಷ ಮೌಲ್ಯದ 340…

Read More

ಗುರುಪೂರ್ಣಿಮೆಯ ನಿಮಿತ್ಯ ಗುರು ಸ್ವರೂಪಿ ಜಂಗಮರ ಹಾಗೂ ವಿವಿಧ ದೇವಸ್ಥಾನದ ಅರ್ಚಕರಿಗೆ ಪಾದಪೂಜೆ ಹಾಗೂ ಸತ್ಕಾರ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸಮಸ್ತ ಭಕ್ತ ಮಂಡಳಿಯ ವತಿಯಿಂದ ಗುರುಪೂರ್ಣಿಮೆಯ ನಿಮಿತ್ಯ ಸತ್ಯನಾರಾಯಣ ಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಮದುರ್ಗ ನಗರದ ಗುರು ಸ್ವರೂಪಿ ಜಂಗಮರನ್ನು ಹಾಗೂ ವಿವಿಧ ದೇವಸ್ಥಾನಗಳ ಅರ್ಚಕರನ್ನು ಪಾದಪೂಜೆ ಮಾಡಿ ಸತ್ಕರಿಸಲಾಯಿತು. ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಯನ್ನು ಸಂಗಮೇಶ ಉದಪುಡಿ ಸಂಗೀತ ಸೇವೆಯನ್ನು ಕೃಷ್ಣ ಕೊಳದೂರ ವಂದನಾರ್ಪಣೆಯನ್ನು H K ದಾಸರ ಅವರು ನೆರವೇರಿಸಿ ಕೊಟ್ಟರು ಆಶೀರ್ವಚನವನ್ನು ದಾಸ…

Read More

ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಎಲ್ಲ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಇರಬೇಕು. ಆದರೆ ನಗರದಲ್ಲಿ ಸರ್ಕಾರದ ಈ ನಿಯಮ ಸರಿಯಾಗಿ ಪಾಲನೆಯಾಗಿಲ್ಲ ಎಂಬುವುದು ಕಂಡುಬರುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಯು ಈ ಕುರಿತು ಕ್ರಮವಹಿಸಬೇಕು ಎಂದರು. ಎಲ್ಲ ಪ್ರಕಾರದ ಅಂಗಡಿ, ಮುಗ್ಗಟ್ಟುಗಳ ಹಾಗೂ…

Read More

ಕನ್ನಡ ಅನುಷ್ಠಾನ: ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆವಹಿಸಿ ಅವರು ಮಾತನಾಡಿದರು.ಕರ್ನಾಟಕ ಇತ್ತೀಚಿಗೆ ಶೈಕ್ಷಣಿಕವಾಗಿ ಕನ್ನಡ ಹಿಂದೆ ಉಳಿದಿರುವುದು ಕೆಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರತಿಯೊಬ್ಬರು ಭಾಷಾ ಉಳಿವಿಗೆ ಕಾನೂನಾತ್ಮಕವಾಗಿ ಹೋರಾಟ ನಡೆಸಬೇಕಿದೆ. ಭಾಷೆ ಉಳಿವಿಗೆ ನಿರಂತರ ಭಾಷಾ ಬಳಕೆ ಮಾಡುವುದು ಕಡ್ಡಾಯವಾಗಿದೆ ಎಂದರು. ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಹೆಚ್ಚು ಒತ್ತು ನೀಡಬೇಕು.ಎಲ್ಲರೂ ಇತರೆ ಭಾಷೆಗೆ ಗೌವರವಿಸುವುದರು ಜೊತೆಗೆ…

Read More

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದರು

ರಾಮದುರ್ಗ, ಕೇಂದ್ರ ಸರಕಾರ ಹಿಂದಿರುವ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ದುಡಿಯುವ ಜನರನ್ನು ಗುಲಾಮಗಿರಿಗೆ ತಳ್ಳುತ್ತಿರುವ ನೀತಿಯನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆ ರಾಮದುರ್ಗ ಮಿನಿ ವಿಧಾನಸೌಧದ ಎದುರು ಇರುವ ರಸ್ತೆಯನ್ನು ಸುಮಾರು ಒಂದೂವರೆ ಗಂಟೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆ ತಡೆ ಮಾಡಿದ ಕಾರ್ಮಿಕ ಮುಖಂಡರನ್ನು ಮತ್ತು ಕಾರ್ಮಿಕರನ್ನು ಬಂಧಿಸಿದ ಪೋಲಿಸರು ನಂತರ ಬಿಡುಗಡೆ ಮಾಡಿದರು. ಕೇಂದ್ರ ಸರಕಾರವು ಕಾರ್ಮಿಕ ಕಾನೂನುಗಳನ್ನು ಬಂಡವಾಳದಾರರ…

Read More

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಧಾರವಾಡ ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರ್ಉದ್ಘಾಟಿಸಿ ಮಾತನಾಡಿದ ಅವರು ನನ್ನ…

Read More

ಸರಸ್ವತಪುರ ಸರಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ.

ಧಾರವಾಡ ನಗರದ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ.9 ಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದಿಢೀರ್ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ, ಶಾಲೆ ಕಟ್ಟಡ ಪರಿಶೀಲಿಸಿದರು. ಶಾಲಾ ಕಟ್ಟಡ ಸೋರಿಕೆ ಕುರಿತು ಸಾರ್ವಜನಿಕ ದೂರು ಹಿನ್ನಲೆಯಲ್ಲಿ ಅವರು ಕಲಘಟಗಿ ರಸ್ತೆಯ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಟ್ಟಡ ಸೋರಿಕೆ ಹಾಗೂ ತರಗತಿಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಿದರು. ಪ್ರತಿ ತರಗತಿಗೆ ಹೋಗಿ, ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ವಿತರಿಸಿರುವ ಸಮವಸ್ತ್ರ,…

Read More

ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ…

Read More