ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸ ಹಾಗೂ ಆಹಾರ ಇಲಾಖೆ ಜಪ್ತಿ ಮಾಡಿರುತ್ತಾರೆ
ಗದಗ್ ಜಿಲ್ಲಾ ನರಗುಂದ ತಾಲೂಕಿನ ಕೊಣ್ಣೂರ ಬಳಿ ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ನರಗುಂದ ಪೊಲೀಸರು ಹಾಗೂ ಆಹಾರ ನಿರೀಕ್ಷರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಯಲಬುರ್ಗಾ ತಾಲ್ಲೂಕಿನ ಪುಟಗಮಮರಿ ನಿರಂಜನಯ್ಯ ಕಂಟಿಬಸಯ್ಯ ನಂದಾಪುರ ಎಂಬ ವ್ಯಕ್ತಿ ಕ್ಯಾಂಟರ್ ವಾಹನದಲ್ಲಿ ಗಜೇಂದ್ರಗಡದಿಂದ ಕೊಣ್ಣೂರ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿಗೆ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ವಾಹನ ಸಮೇತ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಮಾಹಿತಿ ನೀಡಿದ ಆಹಾರ…
