BREAKING NEWS

ಫ್ರಿಜ್ ರಿಪೇರಿ ಮಾಡದ ವಿಲ್ರ್ಪೂಲ್ ಇಂಡಿಯಾ (Whirlpool India) ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಕಲಘಟಗಿಯ ಭೋವಿ ಓಣಿಯ ನಿವಾಸಿ ಸೂರಜ್ ಬಾಳಿಕಾಯಿ ಎನ್ನುವವರು ಎದುರುದಾರರ ಹುಬ್ಬಳ್ಳಿಯ ಡೀಲರ್ ಆದ ಪೈ ಇಂಟರ್ ನ್ಯಾಶ್ನಲ್ ಇಲೆಕ್ಟ್ರಾನಿಕ್ಸ ಇವರಲ್ಲಿ ಫ್ರಿಜ್‍ನ್ನು 2018 ರಲ್ಲಿ ಖರೀದಿಸಿದ್ದರು. ಅದು 10 ವರ್ಷದ ವಾರಂಟಿ ಮತ್ತು ಕಾಂಪ್ರೆಸರ್ ಮೇಲೆ 9 ವರ್ಷದ ವಾರಂಟಿಯನ್ನು ಹೊಂದಿತ್ತು. 2024 ರಲ್ಲಿ ದೂರುದಾರರ ಫ್ರಿಜ್ ತಂಪಾಗದೇ ಸರಿಯಾಗಿ ಕೆಲಸ ಮಾಡುತ್ತಿಲ್ಲದ ಕಾರಣ ದೂರುದಾರರು ಹಲವು ಬಾರಿ ಎದುರುದಾರರಿಗೆ ವಿನಂತಿಸಿದರೂ ಎದುರುದಾರರು ಫ್ರಿಜ್ ದುರಸ್ತಿಯ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಎದುರುದಾರರ ಅಂತಹ…

Read More

ನಬಾರ್ಡ ನೆರವು : ಸ್ವಾವಲಂಬಿ ಸಖಿ ಒಕ್ಕೂಟದ ಉತ್ಪನ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್

ಧಾರವಾಡ ಜುಲೈ 15 ರಂದು ನಬಾರ್ಡ ಕ್ಷೇತ್ರಿಯ ಕಾರ್ಯಲಯ ಬೆಂಗಳೂರುನಲ್ಲಿ ಆಯೋಜಿಸಿದ್ದ ನಬಾರ್ಡ 44 ಸಂಸ್ಥೆ ದಿನಾಚರಣೆ ಅಂಗವಾಗಿ ಸ್ವಾವಲಂಬಿ ಒಕ್ಕೂಟಗಳು ಆಯೋಜಿಸಿದ್ದ ಕೈ ಕುಸುರಿ ಹಾಗೂ ಕೈಮಗ್ಗ ವಸ್ತುಗಳ ಪ್ರದರ್ಶನದಲ್ಲಿ ಭಾಗವಹಿಸಿದ್ದ ಧಾರವಾಡದ ಸ್ವಾವಲಂಬಿ ಸಖಿ ಒಕ್ಕೂಟ ತಯಾರಿಸಿದ ಅದ್ಭುತವಾದ ಆರಿ ಕಸೂತಿ ಉತ್ಪನ್ನಗಳಿಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜಿನೀಶ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಆರಿ ಕಲೆಯು, ಕಾಶ್ಮೀರದಲ್ಲಿ ಹುಟ್ಟಿಕೊಂಡಿದ್ದರು, ನಮ್ಮ ಧಾರವಾಡದ ಮಹಿಳೆಯರು ಅದನ್ನು ವಿವಿಧ ಉತ್ಪನ್ನಗಳಿಗೆ ಅಳವಡಿಸಿಕೊಂಡಿದ್ದಾರೆ….

Read More

ಸೆ. 13 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್

ಧಾರವಾಡ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ, ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಉಚ್ಚ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯ ಮತ್ತು ತಾಲೂಕ ನ್ಯಾಯಾಲಯಗಳಲ್ಲಿ ಬರುವ ಸೆಪ್ಟಂಬರ್ 13, 2025 ರಂದು ರಾಜ್ಯಾದ್ಯಂತ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲು ಸೂಚಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಜಿ.ಪಂ. ಸಿಇಓ ಭುವನೇಶ ಪಾಟೀಲ ಗ್ರಾಮ ಭೇಟಿ: ನಲವಡಿಯಲ್ಲಿ ನರೇಗಾ ಕಾಮಗಾರಿ ವೀಕ್ಷಣೆ;ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ

ಹುಬ್ಬಳ್ಳಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮತ್ತು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಅಣ್ಣಿಗೇರಿ, ತಹಶಿಲ್ದಾರರು, ಸಹಾಯಕ…

Read More

ಮಲಪ್ರಭಾ ಅಚ್ಚುಕಟ್ಟುಪ್ರದೇಶದ ಕಾಲುವೆಗಳಿಗೆ ನೀರು ಬಿಡಲು ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಬೆಳಗಾವಿ ಮಲಪ್ರಭಾ ಜಲಾಶಯದಲ್ಲಿ ಸದ್ಯ 25 ಟಿಎಂಸಿ ನೀರು ಸಂಗ್ರಹವಿದ್ದು, ಜನ ಜಾನುವಾರುಗಳಿಗೆ ಮುಂದಿನ ಜುಲೈವರೆಗೂ ಕುಡಿಯಲು 20 ಟಿಎಂಸಿ ನೀರು ಮೀಸಲಿರಿಸಿ, ಉಳಿದಂತಹ 4.5 ಟಿಎಂಸಿ ನೀರನ್ನು ಬೆಳೆದ ಬೆಳೆಗಳಿಗೆ ಅನುಕೂಲವಾಗುವಂತೆ ಜುಲೈ 18 ರಿಂದ 17 ದಿನಗಳವರೆಗೆ ಮಲಪ್ರಭಾ ಅಚ್ಚುಕಟ್ಟುಪ್ರದೇಶದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಉತ್ತರ ವಲಯದ…

Read More

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಬೆಳಗಾವಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿಗಳು ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿಗಳ ಕೊರತೆ ಕಡಿಮೆಯಾಗಲಿದೆ ಎಂದರು….

Read More

ತುರನೂರು ಗ್ರಾಮದ ನಿವಾಸಿ ಸುಧಾ ದೇಶುರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಪ್ಲಾಟನಲ್ಲಿ ನಿವಾಸಿಯಾಗಿರುವ ಸುಧಾ ದೇಶುರ ಎಂಬ ಯುವತಿ ವಯಸ್ಸು22 ತನ್ನ ಸ್ವಂತ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈ ಆತ್ಮಹತ್ಯೆಗೆ ಯಾರೂ ಕಾರಣ ಎಂಬುವುದು ಪ್ರಶ್ನೆಯಾಗಿದೆ ನೇಣು ಬಿಗಿದುಕೊಳ್ಳುವುದರ ಬಗ್ಗೆ ಯಾವದೆ ಕಾರಣ ತಿಳಿದು ಬಂದಿಲ್ಲ. ರಾಮದುರ್ಗ ತಾಲೂಕ ಆಸ್ಪತ್ರೆಯಲ್ಲಿ ಸುಧಾನ ತಾಯಿ ಮಹಾದೇವಿ ದೇಶುರ್ ಡಿ ಗ್ರೂಪ್ ದರ್ಜೆಯಲ್ಲಿ ಕೆಲಸ ನೀರವಹಿಸಿತಿದ್ದರು 2ವರ್ಷದ ಹಿಂದೆ ಕ್ಯಾನ್ಸರನಿಂದ ಮರಣ ಹೊಂದಿದ್ದಾರೆ ತಾಯಿ ನೌಕರಿ ಮಗಳ…

Read More

ರಾಮದುರ್ಗ,ಬಾದಾಮಿ: ಮಲಪ್ರಭಾ ನದಿಗೆ ನೀರು ಬಿಡಲು ರೈತರಿಂದ ಒತ್ತಾಯ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡಬೇಕೆಂದು ರಾಮದುರ್ಗ ಹಾಗೂ ಬದಾಮಿ ತಾಲೂಕಿನ ರೈತರು ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧಿಕ್ಷರ ಅಭಿಯಂತರರ ಕಾರ್ಯಾಲಯ ಮಲಪ್ರಭಾ ಎಡದಂಡೆ ಕಾಲುವೆ ನಿರ್ಮಾಣ ವೃತ್ತ ನವಿಲುತೀರ್ಥ ಆಡಳಿತ ಅಧಿಕಾರಿ ಮಮತಾ ಮೂಲಿಮನಿ, ಹಾಗೂ ವಿಭಾಗ ಅಧಿಕಾರಿ ಕಿರಣ ಗುಬ್ಬನ್ನವರ್ ಇವರಿಗೆ ಮಲಪ್ರಭಾ ನದಿಗೆ ಮತ್ತು ಎಡದಂಡೆ ಕಾಲುವೆಗೆ ಜಾನುವಾರಗಳಿಗೆ ಕುಡಿಯಲಿಕ್ಕೆ ಮತ್ತು ಕೆರೆ ಕಟ್ಟೆ ಗಳನ್ನು ತುಂಬಿಸಿಕೊಳ್ಳಲಿಕ್ಕೆ ನೀರು…

Read More

ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 27 ವಾರ್ಡ್ ಗಳಿಗೆ ಸನ್ 2024-25 ನೇ ಸಾಲಿನಲ್ಲಿ ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸೋಮವಾರ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಾಮದುರ್ಗ ಪುರಸಭೆಯಲ್ಲಿ ಇದ್ದಂತಹ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಎನ್ನದೆ ಪಟ್ಟಣದ 27 ವಾರ್ಡುಗಳಿಗೆ ಅಭಿವೃದ್ಧಿ ತಾರತಮ್ಯ ಮಾಡದೆ ಎಲ್ಲ ವಾರ್ಡಗಳಿಗೆ ನಾವು ಕೆಲಸ ಹಾಕಿದ್ದೇವೆ…

Read More

ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು. ಅವರು ಮಾತನಾಡಿದರು.‌ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ’ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷರು ಲಕ್ಷ್ಮಿ ಜ. ಕಡಕೋಳ, ಉಪಾಧ್ಯಕ್ಷರು ಸರಿತಾ ಜಿ. ದೂತ, ಸ್ಥಾಯಿ ಸಮಿತಿ ಚೇರ್ಮನ್ ರಾಜು ಎಸ್…

Read More