ಲೋಕಾಪೂರ ದಿಂದ ಧಾರವಾಡ ರೈಲ್ವೆ ಮಾರ್ಗಕ್ಕಾಗಿ ಪೂರ್ವಭಾವಿ ಸಭೆ
ಬಾಗಲಕೋಟ ಜಿಲ್ಲೆ ಲೋಕಾಪೂರದ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಲೋಕಾಪೂರ ಟು ಧಾರವಾಡ ರೈಲ್ವೆ ಮಾರ್ಗ ಯೋಜನೆಯು ಅನುಷ್ಠಾನಗೊಳ್ಳಲೇ ಬೇಕು. ಇಲ್ಲವಾದರೆ ಜನಾಂದೋಲನದ ಮೂಲಕ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಖಾಜಿ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರ ಬೇಡಿಕೆಯಾದ ಲೋಕಾಪೂರ ಟು ಧಾರವಾಡ ನೂತನ ರೈಲ್ವೆ ಮಾರ್ಗಕ್ಕಾಗಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಲೋಕಾಪೂರ ಪಟ್ಟಣದ ಶ್ರೀ ಶಂಭುಲಿಂಗ ಮಠದಲ್ಲಿ ಹಿರಿಯ ನಾಗರಿಕರ ಸೇವಾ ಸಂಘದ ವತಿಯಿಂದ ಪೂರ್ವಭಾವಿ…
