ರಾಮದುರ್ಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿರುವ ಗುರುಭವನದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಕಲಿಕೆಯ ಗುಣಮಟ್ಟ ಕಡಿಮೆಯಾಗುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಲ್ಲಿ ಸಂಖ್ಯೆ ಕಡಿಮೆಯಾಗುತ್ತಿದೆ. ಶಿಕ್ಷಕರು ಸಮಯ ಪ್ರಜ್ಞೆ ಹಾಗೂ ಶಿಸ್ತು ಅಳವಡಿಸಿಕೊಳ್ಳಬೇಕು. ನಾನು ಕೂಡಾ ಶಾಲೆಗೆ ಬೇಟಿ ನೀಡುತ್ತೇನೆ. ಶಿಕ್ಷಕರು ಗೈರು ಇದ್ದರೆ ಅವರ ಮೇಲೆ ಸೂಕ್ತ ಕ್ರಮ ತಗೆದುಕೊಳ್ಳುತ್ತೇನೆ. ಶಿಕ್ಷಣಾಧಿಕಾರಿಗಳು ಕೂಡಾ…
