BREAKING NEWS

ರಾಮದುರ್ಗ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲೆ ಆವರಣದಲ್ಲಿರುವ ಗುರುಭವನದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಅವರು ಮಾತನಾಡಿದರು.ಶಾಲೆಯಲ್ಲಿ ಕಲಿಕೆಯ ಗುಣಮಟ್ಟ ಕಡಿಮೆಯಾಗುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಲ್ಲಿ ಸಂಖ್ಯೆ ಕಡಿಮೆಯಾಗುತ್ತಿದೆ. ಶಿಕ್ಷಕರು ಸಮಯ ಪ್ರಜ್ಞೆ ಹಾಗೂ ಶಿಸ್ತು ಅಳವಡಿಸಿಕೊಳ್ಳಬೇಕು. ನಾನು ಕೂಡಾ ಶಾಲೆಗೆ ಬೇಟಿ ನೀಡುತ್ತೇನೆ. ಶಿಕ್ಷಕರು ಗೈರು ಇದ್ದರೆ ಅವರ ಮೇಲೆ ಸೂಕ್ತ ಕ್ರಮ ತಗೆದುಕೊಳ್ಳುತ್ತೇನೆ. ಶಿಕ್ಷಣಾಧಿಕಾರಿಗಳು ಕೂಡಾ…

Read More

ಸವದತ್ತಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು.

ಸಮಾಜದ ವಾಸ್ತುಶಿಲ್ಪಿಗಳು ಮತ್ತು ಭವಿಷ್ಯದ ನಾಯಕರನ್ನು ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ವಿಶ್ವಾಸ್ ವಸಂತ ವೈದ್ಯ ಹೇಳಿದರು. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರಗಿದ ಶಿಕ್ಷಕರ ದಿನಾಚರಣೆ, ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಸ್ಫೂರ್ತಿ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಶಿಕ್ಷಕರ ಸೇವೆ ಅಪಾರ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ…

Read More

ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗುರುವಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ವಿವಿಧ ರಾಜಮನೆತನ, ಬ್ರಿಟಿಷರ ಆಡಳಿತಕ್ಕೆ ಒಳಪಟ್ಟಿದ್ದ ಸವದತ್ತಿ ಪುರಸಭೆ 1876ರಲ್ಲಿ ಪುರಸಭೆಯಾಗಿ ಇಂದಿಗೆ 150 ವರ್ಷ ಪೂರೈಸಿದೆ. ಅಲ್ಲದೆ, ನಗರದ ಜನಸಂಖ್ಯೆ ಕೂಡ 50 ಸಾವಿರ ಗಡಿ ದಾಟಿರುವ ಹಿನ್ನೆಲೆ 2023ರಲ್ಲಿಯೇ ನರಗಸಭೆಯನ್ನಾಗಿ ಮೇಲ್ದಗೇರಿಸಲು ಜಿಲ್ಲಾಡಳಿತವು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆ ಸರ್ಕಾರವು ಸಮೀಕ್ಷೆಯ ವರದಿ ಹಾಗೂ ಶಾಸಕ ವಿಶ್ವಾಸ ವಸಂತ ವೈದ್ಯ ಅವರು…

Read More

3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್‌ ಗುತ್ತಿಗೆದಾರರೊಬ್ಬರಿಂದ 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು ಹಣವನ್ನು ಕಮೀಷನ್‌ ನೀಡಬೇಕು ಎಂದು ಬೇಡಿಕೆಯೊಡ್ಡಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್‌ ಗುತ್ತಿಗೆದಾರ ಎಸ್‌.ಆರ್‌.ಸಂಜಯ್‌ ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ

Read More

70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ…

Read More

ನವಲಗುಂದ ಪುರಸಭೆ ಡಿಸಿ ಸೂಚನೆ ಮೇರೆಗೆ ಇಂದಿರಾ ಕ್ಯಾಂಟೀನ್‍ಗೆ ದಿಢೀರ ಭೇಟಿ ನೀಡಿ, ಅಧಿಕಾರಿಗಳಿಂದ ಪರಿಶೀಲನೆ; ನಿಯಮಪಾಲಿಸದೇ ಇದ್ದಲ್ಲಿ ಶಿಸ್ತು ಕ್ರಮದ ಎಚ್ಚರಿಕೆ

ಧಾರವಾಡ ಜಿಲ್ಲಾ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳ ತಂಡ ರಚಿಸಿ, ಪರಿಶೀಲನೆಗೆ ಆದೇಶಿಸಿದ್ದರು. ಬೆಳಿಗ್ಗೆ 7:30 ಗಂಟೆಗೆ ನವಲಗುಂದ ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ ಅವರ ನೇತೃತ್ವದ ಅಧಿಕಾರಿಗಳ ತಂಡವು ದಿಢೀರ ಭೇಟಿ ನೀಡಿ, ಸ್ವತಃ ಉಪಹಾರ ಸೇವಿಸುವ ಮೂಲಕ ಆಹಾರದ ಪ್ರಮಾಣ, ಆಹಾರದ ಗುಣಮಟ್ಟ…

Read More

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೆ. 06 ರಂದು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜನೆ

ಧಾರವಾಡ ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ 6 ರಂದು ಬೆಳಿಗ್ಗೆ 10:30 ಗಂಟೆಯಿಂದ 11:30 ರವರೆಗೆ ನೊಡಲ್ ಅಧಿಕಾರಿ ಡಾ. ಸರಸ್ವತಿದೇವಿ ಭಗವತಿ ಅವರು ಸಂಘಟಿಸಲಿದ್ದಾರೆ. ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಲ್ಲ…

Read More

ಮಹಿಳೆಯರ ಉಚಿತ ಪ್ರಯಾಣಕ್ಕೆ ಮೊಬೈಲ್‍ದಲ್ಲಿ ಆಧಾರ ಕಾರ್ಡ ಫೋಟೊ, ಪಿಡಿಎಫ್ ಪ್ರತಿ ಇದ್ದರೂ ಸಾಕು; ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ

ಸಾರಿಗೆ ಇಲಾಖೆ ಅಧಿಕಾರಿಗಳು ಆಧಾರ್ ಕಾರ್ಡ್‍ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಮೊಬೈಲದಲ್ಲಿ ಆಧಾರ್‍ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿದ ಆಧಾರ್ ಪಿಡಿಎಫ್‍ನ್ನು ಕಂಡಕ್ಟರ್‍ಗೆ ತೋರಿಸಬಹುದು. ಇದು ಮಹಿಳೆಯರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಮಹಿಳೆಯರಿಗೆ ಉಚಿತ…

Read More

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಸಂಚಾರ ಆರೋಗ್ಯ ಘಟಕಕ್ಕೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಚಾರ ಆರೋಗ್ಯ ಘಟಕಕ್ಕೆ ವಿವಿಧ ಹುದ್ದೆಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು (2), ಶುಶ್ರೂಷಕರು (2), ಪ್ರಯೋಗ ಶಾಲಾ ತಂತ್ರಜ್ಞರು (2), ಒಟ್ಟು 6 ಹುದ್ದೆಗಳ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೆಪ್ಟೆಂಬರ 10, 2025 ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 3 ಘಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಭವನದಲ್ಲಿ ಅರ್ಜಿ ಸಲ್ಲಿಸಬಹುದು….

Read More

ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಣೆ

ಧಾರವಾಡ : 2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಯಿತು.ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು. ತಮ್ಮ ಶಾಲಾ ದಿನಗಳಲ್ಲಿ ವಿಪರೀತ ಮಳೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆನೆಪನ್ನು ಸ್ಮರಿಸಿದರು. ತಾವು ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವೆಂದು ತಿಳಿದು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದವು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಮಾತನಾಡಿದರು. ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ…

Read More