BREAKING NEWS

110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರ; ಸೆ.07 ರಂದು ವಿದ್ಯುತ್ ವ್ಯತ್ಯಯ

ಧಾರವಾಡ : 110 ಕೆವಿ. ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ 07, 2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಸೆಪ್ಟೆಂಬರ 07, 2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆ.ಹೆಚ್.ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್,…

Read More

ಒಂದೇ ಕುಟುಂಬದ ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಸಿ ಮತ್ತು ಪರಿಹಾರಕ್ಕೆ ಆದೇಶ

ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಸೆಂಟ್ರಲ್‍ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರಇವರು ಹುಬ್ಬಳ್ಳಿಯ ಗೋಕುಲ ರೋಡ್‍ನಲ್ಲಿರುವ ಎದುರುದಾರರಾದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರಲ್ಲಿತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತವನ್ನು ಠೇವಣಿ ಇಟ್ಟಿದ್ದರು. ಕೇಲವು ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು ಮತ್ತು ಕೇಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು. ದೂರುದಾರರು ಎದುರುದಾರರ ಬಗ್ಗೆ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ…

Read More

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿನೀಡಿ, ಸ್ಟಿಕ್ಕರ್ ಅಂಟಿಸಿದರು. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ…

Read More

ರಾಮದುರ್ಗ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಹತ್ತಿರ ಡಿಎಪಿ ಗೊಬ್ಬರ ತುಂಬಿರುವ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಿದ್ದಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ. ಲಾರಿಯೂ ಹುಬ್ಬಳ್ಳಿ ನವಲೂರಿನಿಂದ ಜಮಖಂಡಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ ಲಾರಿ ನಂಬರ್ KA02 AG 8387 ಅಶೋಕ್ ಲೇಲ್ಯಾಂಡ್ ಟ್ರಕ್ ಚಾಲಕ ವೃತಪಟ್ಟಿರುತ್ತಾನೆ . ಶರಣಪ್ಪಗೌಡ ಭೀಮನಗೌಡ ಹರಳಲ್ಲಿ ವಯಸ್ಸು-39 ಜಾತಿ-ಲಿಂಗಾಯತ ಉದ್ಯೋಗ- ಡ್ರೈವರ್ ಸಾಕಿನ್- ಗುಡಕುಂಠಿ ತಾಲೂಕು -ಯಲಬುರ್ಗಾ ಜಿಲ್ಲಾ – ಕೊಪ್ಪಳ ಘಟನಾ ಸ್ಥಳಕ್ಕೆ…

Read More

ಬೆಟಗೇರಿ:ಕೆನರಾ ಬ್ಯಾಂಕ್‌ನಲ್ಲಿ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳದ ಕಾರ್ಯಕ್ರಮ.

ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ: ಎಮ್.ಪನೀಶಾಯಣ್ಣಬೆಟಗೇರಿ:ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ಗ್ರಾಮೀಣ ವಲಯದ ಕೆನರಾ ಬ್ಯಾಂಕನಿಂದ ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿಕ್ಕೋಡಿ ಕೆನರಾ ಬ್ಯಾಂಕ್ ರಿಜನಲ್ ಆಫೀಸ್‌ನ ಎಜಿಎಮ್ ಎಮ್.ಪನೀಶಾಯಣ್ಣ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಸಾಲ ಮರುಪಾವತಿ ಮತ್ತು ಸ್ವ ಸಹಾಯ ಸಂಘಗಳ ಮೇಳ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬ್ಯಾಂಕಿನಿAದ ಪಡೆದ…

Read More

ಒಳಮೀಸಲಾತಿ ಹಂಚಿಕೆಯಲ್ಲಿ 63 ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಬಂಜಾರ, ಬೋವಿ ವಡ್ಡರ, ಸಮುದಾಯಗಳಿಂದ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಅಂಬೇಡ್ಕರ ಸರ್ಕಲದಲ್ಲಿ ಒಳಮೀಸಲಾತಿಯಿಂದ ಅನ್ಯಾಯಕ್ಕೊಳಗಾದ ಬಂಜಾರ, ಭೋವಿವಡ್ಡರ, ಕೊರಮ, ಕೊರಚ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಮಾನ್ಯ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಭಾರತದಲ್ಲಿ ಸಹಸ್ರಾರು ವರ್ಷಗಳಿಂದ ಜಾರಿಯಲ್ಲಿರುವ ವರ್ಣವ್ಯವಸ್ಥೆ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯಿಂದಾಗಿ ನೂರಾರು ಜಾತಿಗಳು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಸ್ವಾತಂತ್ರ್ಯಾ ನಂತರ ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿ ಪರಿಶಿಷ್ಟ ಜಾತಿ & ಪ.ಪಂಗಡಗಳೆಂದು ಸಂವಿಧಾನಾತ್ಮಕವಾಗಿ ಹಲವು ಸೌಲಭ್ಯಗಳನ್ನು ಪಡೆಯಲು ಡಾ. ಬಾಬಾಸಾಹೇಬ ಅಂಬೇಡ್ಕರವರು…

Read More

ಹಲಗತ್ತಿ ಗ್ರಾಮದಲ್ಲಿ 12 ಅಡಿ ಎತ್ತರದ ಗಣಪತಿ ಪ್ರತಿಷ್ಠಾಪನೆ.

ಹಲಗತ್ತಿ ಗ್ರಾಮದ ಗಣೇಶನ ಹಬ್ಬದಲ್ಲಿ ಹೆಚ್ಚಾಗಿ ಗಮನ ಸೆಳೆಯುವುದು 12 ಅಡಿ ಎತ್ತರ ಗಾತ್ರದ ಗಣೇಶ ಮೂರ್ತಿಗಳು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ಗಜಾನನ ಉತ್ಸವ ಕಮಿಟಿಯಿಂದ 13ನೇ ವರ್ಷದ ಅದ್ದೂರಿ ಗಣೇಶ ಉತ್ಸವದಂದು ಆಗಸ್ಟ್ 27ರಂದು 12 ಅಡಿ ಎತ್ತರದ ಗಣಪತಿಯನ್ನು 11 ದಿನಗಳವರೆಗೆ ಪ್ರತಿಷ್ಠಾಪಿಸಲಾಗಿದೆ. ಸೆಪ್ಟೆಂಬರ್ 5 ರಂದು ಹೋಳಗಿ ಊಟದ ಪ್ರಸಾದ ಇರುತ್ತದೆ. ಹಾಗೂ ಸೆಪ್ಟೆಂಬರ್ 6 ರಂದು ರಾಮದುರ್ಗ ತಾಲೂಕಿನ ಘಟಕನೂರು…

Read More

ರಾಮದುರ್ಗ | ವಾಜಪೇಯಿ ನಗರದ 5ನೇ ದಿನದ ಗಣಪತಿ ವಿಸರ್ಜನೆ.

ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದ ವಾಜಪೇಯಿ ನಗರದಲ್ಲಿ ಗಣೇಶೋತ್ಸವ ನಿಮಿತ್ತ ಆ. 27ರಂದು ಪ್ರತಿಷ್ಠಾಪಿಸಲಾಗಿದ್ದ ಹಲವು ಗಣಪತಿ ಮೂರ್ತಿಗಳನ್ನು ಐದನೇ ದಿನವಾದ ಭಾನುವಾರ ವಿಸರ್ಜಿಸಲಾಯಿತು. ಪಟ್ಟಣದ ಸಾರ್ವಜನಿಕ ಸ್ಥಳಗಳು ಹಾಗೂ ಮನೆಗಳಲ್ಲಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮನೆಗಳಲ್ಲಿ ಪ್ರತಿಷ್ಠಾಪಿಸಲಾದ ಮೂರ್ತಿಗಳನ್ನು ಕುಟುಂಬದ ಸದಸ್ಯರೆಲ್ಲರೂ ಸೇರಿಕೊಂಡು ವಿಸರ್ಜನಾ ಸ್ಥಳಕ್ಕೆ ಕೊಂಡೊಯ್ದು ವಿಸರ್ಜಿಸಿದರು. ಸಾರ್ವಜನಿಕ ಗಣಪತಿ ಮೂರ್ತಿಗಳನ್ನು ಟ್ರ್ಯಾಕ್ಟರಗಳ ಮೂಲಕ ವಿಸರ್ಜನಾ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಮೆರವಣಿಗೆಯುದ್ದಕ್ಕೂ ಜಮಾಯಿಸಿದ್ದ ಯುವಜನತೆ, ಕುಣಿತದೊಂದಿಗೆ ಪಟಾಕಿಗಳ ಸದ್ದು ಸಹ ಜೋರಾಗಿತ್ತು. ರಾಮದುರ್ಗ ಪಟ್ಟಣದಲ್ಲಿರುವ ಮಲಪ್ರಭಾ…

Read More

ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ- ಭೂವಿಜ್ಞಾನ ಇಲಾಖೆ ಅಧಿಕಾರಿ

ಬೆಳಗಾವಿ‌ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಫಯಾಝ್‌ ಅಹ್ಮದ್ ಶೇಖ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಥಣಿ ಪಟ್ಟಣದ ನಿವಾಸಿ ಶೀತಲ್ ಗೋಪಾಲ ಸನದಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಶೀತಲ್ ಅವರ ಪರಿಚಯದ ಗುತ್ತಿಗೆದಾರ ಬಿ.ಕೆ.ಮಗದುಮ್ಮ ಅವರಿಗೆ ಐನಾಪೂರ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ, ಲೋಕೋಪಯೋಗಿ ಇಲಾಖೆಯ…

Read More

ರಾಮದುರ್ಗದಲ್ಲಿ ಸಂಭ್ರಮದಿಂದ ಗಣೇಶ ಹಬ್ಬ ಆಚರಣೆ.

ರಾಮದುರ್ಗ ತಾಲೂಕಿನಾದ್ಯಂತ ಸೇರಿದಂತೆ ಗಣೇಶ ಹಬ್ಬವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು. ಜನರು ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಿದರು. ಹಾಗೆಯೇ ಕೆಲವು ಆಯ್ದ ಸ್ಥಳಗಳಲ್ಲಿ ಯುವಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ನಗರಾದ್ಯಂತ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ಬಾರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಪೊಲೀಸರು ಹೆಚ್ಚಿನ ನಿಗಾವಹಿಸಿದ್ದಾರೆ. ಪ್ರತಿಷ್ಠಾಪನೆ : ಪಟ್ಟಣದ ವಾಜಪೇಯಿ ನಗರ, ಗಾಂಧಿನಗರ, ವಡ್ಡರ ಓಣಿ, ಮಡ್ಡಿಓಣಿ, ಜುನೀಪೇಠ, ಈಟಿಓಣಿ, ನವೀಪೇಠ, ರಾಧಾಪೂರಪೇಠ, ಕಾಶಿಪೇಠ,ನಾರಾಯಣಪೇಠ, ನಿಂಗಾಪೂರಪೇಠ, ಬಾಣಕಾರಪೇಠ, ತೇರಬಜಾರ, ನಾಗಪ್ಪನಕಟ್ಟಿಯಾನಂಪೇಠ,…

Read More