ಜಲ ಸಂರಕ್ಷಣೆಗೆ ಜನಜಾಗೃತಿ
ಬೆಂಗಳೂರು: ನೀರಿನ ಸಂರಕ್ಷಣೆ ಹಾಗೂ ಉಳಿತಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಂಡಳಿಯೊಂದಿಗೆ ಕೈಜೋಡಿಸಿ ಎಂದು ಪ್ಲಂಬರ್ಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. ಜಯನಗರದ ಸರ್ ಎಂ.ವಿಶ್ವೇಶ್ವರಯ್ಯ ಮಳೆ ನೀರು ಸುಗ್ಗಿ ಕೇಂದ್ರದಲ್ಲಿ ಆಯೋಜಿಸಿದ್ದ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1000 ಲೀಟರ್ ನೀರನ್ನು ಮನೆಗಳಿಗೆ ಸರಬರಾಜು ಮಾಡಲು ಮಂಡಳಿಗೆ ಸುಮಾರು 95 ರೂ.ಗಳ ವೆಚ್ಚವಾಗುತ್ತದೆ. ಆದರೆ ಜನರಿಗೆ ನಾವು ರಿಯಾಯಿತಿ ದರವಾದ 45 ರೂ.ಗಳಲ್ಲಿ ನೀರನ್ನು ಒದಗಿಸುತ್ತಿದ್ದೇವೆ. ನೀರಿನ…
