Prashanth Angadi

ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಶನ್ ಉದ್ಘಾಟನೆ

ಬೆಳಗಾವಿ ನಗರದ ಎಸ್.ಜಿ.ಬಿ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಭಾಷಾ ಸೂಕ್ಷ್ಮತೆ ಇರುವುದರಿಂದ ಜಿಲ್ಲೆಯಲ್ಲಿ ನಡೆಯುವ ವರದಿಗಳು ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತವೆ. ಆದ್ದರಿಂದ ಕೆಲವೊಮ್ಮೆ ವೈಯಕ್ತಿಕ ಘರ್ಷಣೆಗಳು‌ ಕೂಡ‌ ಜಾತಿ-ಧರ್ಮ, ಭಾಷಾ ವೈಷಮ್ಯದ ಸ್ವರೂಪ ಪಡೆದುಕೊಂಡು ಜಿಲ್ಲೆಗೆ ಕೆಟ್ಟ ಹೆಸರು ತರುತ್ತವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ….

Read More

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಟ್ಟಿದ್ದ ಮನೆ ಮೇಲೆ ದಾಳಿ ನಡೆಸಿ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡರು.

ಸಿರುಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದ ಶಾಲಿಗನೂರು ರಸ್ತೆ ಬಳಿಯ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಇಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ಎಂ. ವಿಜಯ್ ಕುಮಾರ್ ಹಾಗೂ ಪೊಲೀಸ್ ಠಾಣೆಯ ಪಿ ಎಸ್ ಐ ಪರಶುರಾಮ ನೇತೃತ್ವದ ತಂಡ ದಾಳಿ ನಡೆಸಿ ₹11,730 ಮೌಲ್ಯದ 5.10 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಇಟ್ಟಿದ್ದ ಮನೆ ಮೇಲೆ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಮನೆಯ…

Read More

ಬೆಲೆ ಏರಿಕೆ ವಿರುದ್ಧ ರಾಮದುರ್ಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಅಗತ್ಯ ವಸ್ತುಗಳ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಮದುರ್ಗ ಪಟ್ಟಣದ ತಾಲ್ಲೂಕು ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ-ತೆರಿಗೆ ಹೆಚ್ಚಳದ ಸರಕಾರದ ನೀತಿಗಳ ವಿರುದ್ಧ ಹಾಗೂ ಏರಿಸಿದ ಬೆಲೆಯನ್ನು ಹಿಂಪಡೆಯಲು ಆಗ್ರಹಿಸಿ, ಎಸ್.ಸಿ-ಎಸ್.ಟಿ ಮೀಸಲು ಹಣದ ದುರ್ಬಳಕೆಯನ್ನು ಖಂಡಿಸಿ ಮತ್ತು ಬಿಜೆಪಿಯ 18 ಶಾಸಕರ ಅಮಾನತನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಇವರಿಗೆ ಮನವಿ ಸಲ್ಲಿಸಿದರು. ಬೆಲೆ ಏರಿಕೆಯಿಂದ ಜನರ ಮೇಲೆ ಹೊರೆ ಬಿದ್ದಿದೆ….

Read More

ಅನಧಿಕೃತ ಕೋಚಿಂಗ್ ಕೇಂದ್ರಗಳು ಕೂಡಲೇ ಮುಚ್ಚದಿದ್ದರೆ ಕಾನೂನು ಕ್ರಮ: ಬಿಇಓ ದಂಡಿನ ಎಚ್ಚರಿಕೆ.

ಬೆಳಗಾವಿ ಜಿಲ್ಲೆ ಸವದತ್ತಿ ಮತ್ತು ಯರಗಟ್ಟಿತಾಲೂಕಿನಲ್ಲಿ ಅನಧಿಕೃತವಾಗಿ ಕೋಚಿಂಗ್ ಕೇಂದ್ರಗಳು ಹಾಗೂ ವಸತಿ ನಿಲಯಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ತರಬೇತಿ ಕೇಂದ್ರಗಳನ್ನು ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಕರ್ಯ ಒದಗಿಸದೇ ನಿಯಮ ಬಾಹಿರವಾಗಿ ಕೋಚಿಂಗ್ ನೀಡುತ್ತಿರುವುದನ್ನು ಕೂಡಲೇ ನಿಲ್ಲಸಬೇಕು. ಒಂದು ವೇಳೆ ಹೀಗೆ ಮುಂದುವರೆದಲ್ಲಿ ಅಂತವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅವರು ಪ್ರಕಟಣೆ ಮೂಲಕ ತಿಳಿಸಿದರು

Read More

ಬಾಗಲಕೋಟೆಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಮಾಡಲಾಯಿತು.

ಬಾಗಲಕೋಟ ಜಿಲ್ಲೆ ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಎ.ಎಸ್.ಐ ಡಿ.ಸಿ.ಗುಡ್ಡಳ್ಳಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಂದನೆ ಸ್ವೀಕಾರ ಮತ್ತು ಸಾಂಪ್ರದಾಯಿಕ ಕವಾಯತು ವೀಕ್ಷಣೆ ಮಾಡಿದರು.ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ,ಹೆಚ್ಚುವರಿ ಎಸ್ಪಿಗಳಾದ ಪ್ರಸನ್ಮ ದೇಸಾಯಿ, ಮಹಾಂತೇಶ್ವರ ಜಿದ್ದಿ ಹಾಗೂ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಗ್ಯಾಸ್ ರೀಪಿಲ್ಲಿಂಗ್ ದಂಧೆ : 470 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಜಪ್ತಿ.

ಧಾರವಾಡ ಸಮೀಪದ ಜೋಗೆಲ್ಲಾಪುರದ ಬನಶಂಕರಿ ಎಂಟರ್ ಪ್ರೈಜಿಸ್ ನ ಎಚ್.ಪಿ. ಗ್ಯಾಸ್ ಸಿಲಿಂಡರ್ ಗೋಡೌನ್ ನಲ್ಲಿಸಿಲಿಂಡರ್ ರೀಫಿಲ್ಲಿಂಗ್ ದಂಧೆ ನಡೆಯುತ್ತಿದ್ದ ಅಡ್ಡೆಯ ಮೇಲೆ ತಹಸೀಲ್ದಾರ್ ಡಿ.ಎಚ್. ಹೂಗಾರ ನೇತೃತ್ವದ ತಂಡ, ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ 470 ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಹಾಗೂ ರೀಫಿಲ್ಲಿಂಗ್ ಗೆ ಬಳಸುತ್ತಿದ್ದ ಯಂತ್ರಗಳನ್ನೂ ವಶಕ್ಕೆ ಪಡೆದಿದ್ದಾರೆ. ಎಚ್.ಪಿ. ಸಿಲಿಂಡರ್ ಗುಡೌನ್ ನಲ್ಲಿ ಭಾರತ ಗ್ಯಾಸ್ ಕಂಪನಿಯ ಮತ್ತು ಗೋ ಗ್ಯಾಸ್ ಕಂಪನಿಯ…

Read More

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು ಏ.02: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ…

Read More

ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಬೆಳಗಾವಿ, ಭಾರತ ಸರ್ಕಾರ/ಹುಡ್ಕೋ ಮತ್ತು ಕರ್ನಾಟಕ ಸರ್ಕಾರದ ಪ್ರೋತ್ಸಾಹಿತ ಜಿಲ್ಲಾ ನಿರ್ಮಿತಿ ಕೇಂದ್ರದ ವತಿಯಿಂದ ಗಣೇಶಪುರ ಲಕ್ಷ್ಮೀ ಟೇಕ್ ಹತ್ತಿರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಿಂಬಾಗದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ನಿರ್ಮಿತಿ‌ಕೇಂದ್ರದ ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ರವಿವಾರ ಉದ್ಘಾಟಿಸಿದರು. ಬಳಿಕ ಜಿಲ್ಲಾ ನಿರ್ಮಿತಿ ಕೇಂದ್ರದ ನೂತನ ಕಟ್ಟಡದ ಗುಣಮಟ್ಟ, ವಿನ್ಯಾಸ, ಕಚೇರಿಯ ಕೊಠಡಿಗಳು, ಮುಂಭಾಗದ ಉದ್ಯಾನವನ ವೀಕ್ಷಿಸಿದ ಸಚಿವರು, ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ…

Read More

ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು :ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ನಾರ್ಕೋ (ಎನ್- ಕೊರ್ಡ್) ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಹಿಸಿ, ಮಾತನಾಡಿದರು. ಡ್ರಗ್ಸ್ ದಂದೆ ತಡೆಯಲು ಮತ್ತು ಯುವ ಸಮೂಹವನ್ನು ಮಾದಕ ವಸ್ತಗಳ ಜಾಲದಿಂದ ದೂರವಿಡಲು ಎಲ್ಲರ ಸಹಕಾರವು ಬೇಕು. ವಿಶೇಷವಾಗಿ ವಿದ್ಯಾರ್ಥಿಗಳ, ಪಾಲಕರ ಮತ್ತು ಶಿಕ್ಷಕರ ಮಧ್ಯದಲ್ಲಿ ಉತ್ತಮ ಸಂಪರ್ಕ ಮತ್ತು ಸಮನ್ವಯ ಸಾಧಿಸಬೇಕು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭದಲ್ಲಿ ಪ್ರತಿ ಶಾಲಾ ಕಾಲೇಜುಗಳಲ್ಲಿ ನೂತನ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿ…

Read More

ಕಲಘಟಗಿ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ ನೀಡಿ ಪರಿಶೀಲನೆ

ಧಾರವಾಡ ಮಾ.29:ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಷಿಕ ಪರೀಕ್ಷೆ-1 ರ ನಾಲ್ಕನೇಯ ಪರೀಕ್ಷೆಯಾದ ಇಂದು ಸಮಾಜ ವಿಜ್ಞಾನ ಪರೀಕ್ಷೆಯು ಜಿಲ್ಲೆಯಾದ್ಯಂತ ಶಾಂತ ರೀತಿಯಿಂದ ಸುಸೂತ್ರವಾಗಿ ಜರುಗಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಬೆಳಿಗ್ಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ, ಗೈರು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಯರಿಕೊಪ್ಪ, ಕಲಘಟಗಿ ಪಟ್ಟಣದ ಸೇಂಟ್ ಮೇರಿ ಇಂಗ್ಲೀಷ…

Read More