ಕ್ಷೇತ್ರ ಮಟ್ಟದಲ್ಲಿನ ಅಧಿಕಾರಿ ಸಿಬ್ಬಂದಿಗಳು ಕಂದಾಯ ಇಲಾಖೆ ಸೈನಿಕರು;ಬಾಕಿ ಇರುವ ಸೌಲಭ್ಯ ನೀಡಲು ಬದ್ಧ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ನೌಕರರಿಗೆ ಕಾಲಮಿತಿ ಬಡ್ತಿ ಆದೇಶ ಪತ್ರಗಳನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಿತರಿಸಿ, ಮಾತನಾಡಿದರು. ಕಂದಾಯ ಇಲಾಖೆಗೆ ಇಡೀ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನವಿದ್ದು, ಮಾತೃ ಇಲಾಖೆ ಆಗಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಕ್ಷೇಮ, ಸಂತೋಷ ಮುಖ್ಯವಾಗಿದೆ. ಎಲ್ಲರೂ ಸಂತೋಷದಿಂದ ಕೆಲಸ ಮಾಡಿದರೆ ನಿಷ್ಪಕ್ಷಪಾತವಾಗಿ, ತ್ವರಿತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬೇಡಿಕೆಗಳಲ್ಲಿ ಜಿಲ್ಲಾ ಹಂತದ ಪರಿಹರಿಸುವ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು….

Read More

ಶುದ್ಧ ಕುಡಿಯುವ ಪೂರೈಕೆಗೆ ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ಅವರು ಮಾತನಾಡಿದರು. ಸ್ಥಳೀಯ ಸಂಸ್ಥೆಗಳು ಬೇಸಿಗೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಅನುದಾನವನ್ನು ಮೀಸಲಿರಿಸಬೇಕು. ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ನಿರಂತರ ಸಭೆ ನಡೆಸಿ, ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು. ಅಥಣಿ ಭಾಗದಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಹೆಚ್ಚಿದೆ. ನೀರು ಕಡಿಮೆಯಾಗಿರುವ ಜಲಾಶಯ ಮಟ್ಟವನ್ನು ಪರಿಶೀಲಿಸಿ ಅಗತ್ಯ ಪ್ರದೇಶಗಳಲ್ಲಿ ನೀರು…

Read More

ನರೇಗಾ ಕೂಲಿ ದಿನಕ್ಕೆ 349 ರಿಂದ 370 ಕ್ಕೆ ಹೆಚ್ಚಳ ಏಪ್ರಿಲ್ -01 ರಿಂದ ಜಾರಿ :ಜಿ.ಪಂ. ಸಿ.ಇ.ಒ ರಾಹುಲ್ ಶಿಂಧೆ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಅಕುಶಲ ಕೂಲಿಕಾರರಿಗೆ ಏ.01 ರಿಂದ ಪರಿಷ್ಕೃತ ಕೂಲಿ ಮೊತ್ತ 349 ರಿಂದ 370 ಕ್ಕೆ ಹಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಸಿ.ಇ.ಒ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಪ್ರತಿ ದಿನ ಕೆಲಸಕ್ಕೆ ಗಂಡು ಹೆಣ್ಣಿಗೆ ಸಮಾನ ಕೂಲಿ ವೇತನ 370 ಕ್ಕೆ ಹೆಚ್ಚಳ ಮಾಡಲಾಗಿದೆ. ಒಂದು ಆರ್ಥಿಕ ವರ್ಷದಲ್ಲಿ 100 ದಿನ ಕೆಲಸ ಮಾಡಿ 37 ಸಾವಿರ ರೂ….

Read More

ಮಹಿಳೆಯರಿಗಾಗಿ ಕಾನೂನುಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಕ್ಕನ ಬಳಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶ್ರೀ. ಮಹಾಂತ ದುರದುಂಡೇಶ್ವರ ಮಠ, ಯರಗಟ್ಟಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಶ್ರೀ. ಆರ್.ಎಸ್. ಆಲದಕಟ್ಟಿ, ರವರು ಮಾತನಾಡಿ ಪ್ರತಿವರ್ಷ ಮಾರ್ಚ್‌ 8 ರಂದೇ ಮಹಿಳಾ ದಿನ ಆಚರಣೆ ಮಾಡಲಾಗುವುದು ಲಿಂಗಾಧಾರಿತ ದೃಷ್ಠಿಕೋನವು ಮಾನವ ಅಭಿವೃದ್ಧಿಯಲ್ಲಿ ಮಹಿಳೆಯರಿಗೆ ನೀಡಿರುವ ಪರಸ್ಪರ ಸ್ಥಾನಮಾನವನ್ನು ವಿವಿಧ ಅಭಿವೃದ್ಧಿ ಸೂಚ್ಯಾಂಕಗಳಾದ ಶಿಕ್ಷಣ,…

Read More

ಕಲ್ಲೂರು ಗ್ರಾಮದ ಹಳ್ಳದಲ್ಲಿ ಅಕ್ರಮ ಮರಳು ಜಪ್ತಿ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಹಳ್ಳದ ಉಸುಕನ್ನು ಸಂಗ್ರಹಿಸಿಕೊಂಡು ರಾತ್ರಿ ಹೊತ್ತು ಟ್ರಿಪ್ಪರ್ ಹಾಗೂ ಟ್ರ್ಯಾಕ್ಟರ್ ಮೂಲಕ ಬೇರೆ ಕಡೆ ಸಾಗಿಸುತ್ತಿದ್ದರು ಇದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ಕಲ್ಲೂರು ಗ್ರಾಮದ ಹಳ್ಳದ ಅಕ್ರಮ ಮರಳು ತುಂಬುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಂಗ್ರಹಿಸಿ ಇಟ್ಟಂತ ಅಕ್ರಮ ಮರಳನ್ನು ಜಪ್ತಿ ಮಾಡಿದರು.

Read More

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಹಾಗೂ ಫಲಾನುಭವಿಗಳೊಂದಿಗೆ ಮುಕ್ತ ಸಂವಾದ ನಡೆಸಬೇಕು. ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಫಲಾನುಭವಿಗಳು ಸಮಸ್ಯೆ ಎದುರಿಸುತ್ತಿದ್ದರೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು. ಯೋಜನೆಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಲಾಭ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು, ಗ್ಯಾರಂಟಿ ಅನುಷ್ಠಾನ ಸಮಿತಿ…

Read More

ಚಾಮರಾಜನಗರ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋಡಾಮಿನ ಮೇಲೆ ದಾಳಿ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶ

ಚಾಮಾಜನಗರ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್‌.25) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ. ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿದ ಗೋಡಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಪಡಿತರ…

Read More

ಅಕ್ರಮ ಪಡಿತರ ಅಕ್ಕಿ ಜಪ್ತಿ ವೇಳೆಯಲ್ಲಿ ಮಾಧ್ಯಮದವರಿಗೆ ಧಮಕಿ ಹಾಕಿದ ಸಚಿನ್ ಕಬ್ಬೂರು

ಹಾವೇರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಮಾರಾಟ ರಾಜಾರೋಷವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಕಡೆ ನ್ಯಾಯಬೆಲೆ ಅಂಗಡಿಗಳ ಪಕ್ಕದಲ್ಲೇ ಕಾಳಸಂತೆ ಅಂಗಡಿಗಳು ಓಪನ್ ಆಗಿವೆ. ಪಡಿತರ ಅಕ್ಕಿ ಕಾಳಸಂತೆಕೋರರ ಬಗ್ಗೆ ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳು ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಅಕ್ಕಿ ದಂಧೆ ಕೋರೋರು ದಮಕಿ ಹಾಕಿ ದರ್ಪ ಮೆರೆದಿದ್ದಾರೆ. ಹಾವೇರಿ ನಗರದ ಅಕ್ಕಿಪೇಟೆಯ ಬಸವರಾಜ ಹಂದ್ರಾಳ ಎಂಬುವವರ ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹ ಮಾಡಲಾಗಿದೆ. ಈ ಬಗ್ಗೆ ವರದಿ ಮಾಡಲು ಹೋಗಿದ್ದ…

Read More

ಕಲಬುರಗಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ಜಪ್ತಿ,

ಕಲಬುರಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿ, ಲಾರಿ ಸಮೇತ 104 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳುವಲ್ಲಿ ಚೌಕ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಿಂಗ್ ರೋಡ್ ಬಳಿಯ ತಾಜ್ ನಗರದಲ್ಲಿ ಪೊಲೀಸರು ಲಾರಿ ತಡೆದು ವಿಚಾರಿಸಿದಾಗ ಚಾಲಕ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರಿಗೆ ಸೇರಿದ ಅಕ್ಕಿ ಎಂದು ಬಾಯ್ಬಿಟ್ಟಿದ್ದಾನೆ. ಲಾರಿ ಚಾಲಕ ವಿರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಪಡಿತರ ಅಕ್ಕಿಯನ್ನು ಲಾರಿ ಸಮೇತ ಪೊಲೀಸರು…

Read More

ಹಳೇ ಹುಬ್ಬಳ್ಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 500 ಕ್ಷಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಹಾಗೂ ಇಬ್ಬರ ರೇಷನ್ ಕಾರ್ಡ್​ ರದ್ದು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಬುಧವಾರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ದಾಳಿ ನಡೆಸಿದೆ. ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದರು . ಅಕ್ರಮವಾಗಿ ಅಕ್ಕಿ ಮಾರಾಟ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರನ್ನುಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿಸಿ, ಟಾಟಾ ಏಸಿ ವಾಹನದಲ್ಲಿ ಲೋಡ್​ ಮಾಡುತ್ತಿದ್ದ ವೇಳೆ ಆಹಾರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ…

Read More