BREAKING NEWS

ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ

ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ…

Read More

ಅಯೋಧ್ಯೆಯಲ್ಲಿ ಕರ್ನಾಟಕದ ತಿಂಡಿಗಳ ಸವಿ ಉಣಬಡಿಸಲಿರುವ ಅದಮ್ಯ ಚೇತನ

ಬೆಂಗಳೂರು ಜನವರಿ 19: ಹಸಿರು ಮತ್ತು ಶೂನ್ಯ ತ್ಯಾಜ್ಯ ಅಡುಗೆ ಮನೆಯ ಖ್ಯಾತಿಯನ್ನ ಹೊಂದಿರುವ, ದಿನ ನಿತ್ಯ ಲಕ್ಷಾಂತರ ಮಕ್ಕಳ ಹಸಿವನ್ನ ನೀಗಿಸುತ್ತಿರುವ ಅದಮ್ಯ ಚೇತನ ಸಂಸ್ಥೆ, ಜನವರಿ 22 ರಿಂದ ಒಂದು ತಿಂಗಳುಗಳ ಕಾಲ ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯ ಮೂಲಕ ಕರ್ನಾಟಕದ ಖಾದ್ಯಗಳ ಸವಿಯನ್ನು ಉಣಬಡಿಸಲಿದೆ. ಅದಮ್ಯ ಚೇತನ ಅಡುಗೆ ಮನೆಯ 16 ಜನರ ತಂಡ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ…

Read More

ಕಂಡಕ್ಟರನ್ನೇ ಬಿಟ್ಟು ಹೊರಟ ಬಸ್ ಡ್ರೈವರ್!

ಕೊಡಗು: ಕಂಡಕ್ಟರ್‌ನನ್ನು ಬಿಟ್ಟು ಚಾಲಕನೊಬ್ಬ ಕೆಎಸ್‌ಆರ್‌ಟಿಸಿ ಬಸ್‌ ಓಡಿಸಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ವಿರಾಜ್ ಪೇಟೆಯಿಂದ ಮೈಸೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿದೆ.ಚಾಲಕನೊಬ್ಬ ಬಸ್‌ ಓಡಿಸಿಕೊಂಡು ತುಂಬಾ ದೂರ ಬಂದಿದ್ದಾನೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಕಂಡಕ್ಟರ್‌ ಬಸ್‌ನಲ್ಲಿ ಇಲ್ಲದಿರುವ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಚಾಲಕನಿಗೆ ಕಂಡಕ್ಟರ್‌ ಇಲ್ಲದಿರುವುದರ ಬಗ್ಗೆ ಅರಿವಾಗಿದೆ. ಇದರಿಂದಾಗಿ ಬಸ್‌ ಅನ್ನು ನಿಲ್ಲಿಸಿದ್ದಾನೆ.ಅದೇ ಸಮಯಕ್ಕೆ ಸರಿಯಾಗಿ ಸ್ಕೂಟಿಯಲ್ಲಿ ಕಂಡಕ್ಟರ್‌ ಬಂದು ಬಸ್‌ ಹತ್ತಿದ್ದಾನೆ. ಈ ವಿಡಿಯೋ…

Read More

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣ್ಣಮಟ್ಟದ ಉಂಡೆ ಕೊಬ್ಬರಿ ಖರೀದಿಗಾಗಿ ಜನವರಿ 20 ರಿಂದ ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಚಿಕ್ಕಮಂಗಳೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಖರೀದಿ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ದಿನ ಅಧಿಕಾರಿಗಳು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದ ಅವರು ಖರೀದಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕೆಂದು ತಿಳಿಸಿದರು.ಸರ್ಕಾರದ ನಿರ್ದೇಶನದನ್ವಯ ಪ್ರತಿ ಕ್ವಿಂಟಾಲ್ ಗುಣಮಟ್ಟದ ಉಂಡೆ ಕೊಬ್ಬರಿಗೆ ರೂ. 12,೦೦೦ಗಳನ್ನು ನಿಗಧಿಪಡಿಸಲಾಗಿದೆ. ಕೊಬ್ಬರಿ ಖರೀದಿಸಲು ಕೇಂದ್ರ…

Read More

ವಿಜಯಲಕ್ಷ್ಮೀ ದೇವಿ ಇವರಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಮಾರ್ಚ್ 9ರಂದು ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ : ರಾಷ್ಟ್ರೀಯಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲುವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು,ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು,ಮೋಟಾರ ವಾಹನ ಅಪಘಾತ ಪರಿಹಾರಕ್ಕೆಸಂಬಂಧಪಟ್ಟ ಪ್ರಕರಣಗಳು, ಕಂದಾಯಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯರಾಜಿಯಾಗು ಪ್ರಕರಣಗಳ ಕುರಿತು ಹಾಗೂನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನುಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತಎಲ್. ವಿಜಯಲಕ್ಷ್ಮೀ…

Read More

ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದಉದ್ಘಾಟನೆ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿಆಸ್ಪತ್ರೆಯೊಂದು ಗುರುವಾರದಿಂದ (ಜ.18) ಜನವರಿ 22ರವರೆಗೆಉಚಿತ ಹೆರಿಗೆ ಮಾಡಿಸುವುದಾಗಿ ಘೋಷಿಸಿದೆ.ವಿಜಯಪುರದಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೆಬಲ್ಟ್ರಸ್ಟ್’ ಈ ನಿರ್ಧಾರ ಪ್ರಕಟಿಸಿದೆ.ಅಯೋಧ್ಯೆಯಲ್ಲಿ ಇದೇ ಸೋಮವಾರ(ಜ.22) ನಡೆಯಲಿರುವ‘ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ’ಯನ್ನು ಆಚರಿಸಲುಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿಮಾಡಲಾಗುತ್ತದೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರುತಿಳಿಸಿದ್ದಾರೆ.

Read More

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂ.ಕಳೆದುಕೊಂಡ ಫೈನಾನ್ಸ್ ಅನಾಲಿಸ್ಟ್!

ಬೆಂಗಳೂರು: ಮತ್ತೊಂದು ಆನ್‌ಲೈನ್ ವಂಚನೆ ಪ್ರಕರಣದಲ್ಲಿ, 41 ವರ್ಷದ ಫೈನಾನ್ಸ್ ಅನಾಲಿಸ್ಟ್ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 3.38 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸಗೊಳಗಾದವರು ದೇಬಾಶಿಶ್ ಬಯೆನ್ ಎಂದು ಗುರುತಿಸಲಾಗಿದೆ.ಕೋಲ್ಕತ್ತಾ ಮೂಲದ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ವಾಸಿಸುವ ಪ್ರೀಮಿಯರ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಕೋಲ್ಕತ್ತಾ (IIMC)ಯಿಂದ ಸ್ನಾತಕೋತ್ತರ ಪದವೀಧರರಾಗಿರುವ ದೇಬಾಶಿಶ್ ಬಯೆನ್ ಭಾನುವಾರ ಎರಡು ವಹಿವಾಟುಗಳಲ್ಲಿ ತನ್ನ ಹಣವನ್ನು ಕಳೆದುಕೊಂಡಿದ್ದಾರೆ.  ಕೊತ್ತನೂರಿನ ಪ್ರತಿಷ್ಠಿತ ಮದ್ಯದ ಅಂಗಡಿಯ ವೆಬ್‌ಸೈಟ್‌ನಿಂದ ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಪ್ರಯತ್ನಿಸಿ ಸಿಕ್ಕ ನಂಬರ್‌ಗೆ ಸಂಪರ್ಕಿಸಿದಾಗ ವಾಟ್ಸ್‌ಆ್ಯಪ್‌ನಲ್ಲಿ…

Read More

ಶಿವಮೊಗ್ಗ: ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಸಾಗಾಟ.!

ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2  ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ…

Read More

ಗೃಹಜ್ಯೋತಿ ನಿಯಮದಲ್ಲಿ ಸರ್ಕಾರದಿಂದ ಮಹತ್ವದ ಬದಲಾವಣೆ ಶೇಕಡವಾರು  ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ. ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ.ಸಚಿವ ಹೆಚ್‌.ಕೆ.ಪಾಟೀಲ್‌ ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ್ದಾರೆ. ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು  ಬದಲಾಗಿ 10 ಯುನಿಟ್…

Read More

ರಾಮ ಮಂದಿರ ಉದ್ಘಾಟನೆ ದಿನ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪಣೆ ಐತಿಹಾಸಿಕ ಮಹತ್ವದ ಸಮಾರಂಭವಾಗಿದ್ದು ಅಂದು ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದಂತೆ ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿಯಂತೆ ರಾಮಜ್ಯೋತಿ ಬೆಳೆಗಿಸಿ ಶ್ರೀರಾಮಚಂದ್ರನನ್ನು ಸ್ವಾಗತಿಸುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.   ಮಂಗಳವಾರದ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಸ್ವಚ್ಛತೀರ್ಥ ಅಭಿಯಾನ ಹಿನ್ನಲೆಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಳಗಳಿಂದ ಹಮ್ಮಿಕೊಂಡ ನಗರದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ದೇಗುಲಗಳ ಸ್ವಚ್ಛತೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.   ಕಾರ್ಯಕರ್ತರು ಹಾಗೂ…

Read More