WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ಶನಿವಾರ ದಿನಾಂಕಃ 08-03-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
ವಿಶೇಷವಾಗಿ ಈ ಬಾರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಥೀಮ್ ಸಾಂಗ್ ಆಡಿಯೋ/ವಿಡಿಯೋ ಪ್ಲೇ ಮಾಡುವ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್ನ್ನು ಪ್ರಾರಂಭಿಸಲಾಯಿತು.
ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿನ 8610 ಬಾಕಿ ಇರುವ ಪ್ರಕರಣಗಳ ಪೈಕಿ ಒಟ್ಟು 1872 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು ಅದರಲ್ಲಿ 805 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದೇ ರೀತಿ ಒಟ್ಟು ರೂ 1,50,48,887/- ಕ್ಕೂ ಹೆಚ್ಚು ಹಣ ವಸೂಲಾತಿಯಾಗಿದೆ ಎಂದು ಗೌರವಾನ್ವಿತ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಶ್ರೀ. ಶಶಿಧರ ಎಮ್. ಗೌಡ, ರವರು ತಿಳಿಸಿದರು.
ಪತಿ-ಪತ್ನಿ ಮನಸ್ತಾಪದ ಪರಿಣಾಮ ದಾಂಪತ್ಯ ಜೀವನದಿಂದ ಸುಮಾರು ವರ್ಷಗಳಿಂದ ಬೇರೆ ಬೇರೆಯಾಗಿ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ಸುಮಾರು 6 ಜೋಡಿ ಪತಿ-ಪತ್ನಿಯರನ್ನು ಮನಮೊಲಿಸಿ ಪುನಃ ಒಗ್ಗೂಡಿಲಾಯಿತು ಅದರಿಂದ ಎರಡೂ ಕಡೆಯ ಪಕ್ಷಗಾರರು, ವಕೀಲರು ಹಾಗೂ ಊರಿನ ಹಿರಿಯರು ಸಂತಸ ವ್ಯಕ್ತಪಡಿಸಿದರು.
ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಸಿದ್ರಾಮ ರೆಡ್ಡಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ,ಮುನವಳ್ಳಿ, ಕಾರ್ಯದರ್ಶಿಗಳಾದ ಎಸ್.ಎಸ್.ಕಾಳಪ್ಪನವರ ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಎ.ನೇಸರಿಕರ, ಎಸ್.ಎಸ್.ಅಂಗಡಿ, ವಕೀಲ ಸಂಧಾನಕಾರರಾದ ಎ.ಎ.ಪಠಾಣ, ಎಸ್.ಎಮ್.ಪೆಂಡಾರಿ, ಹಾಗೂ ನ್ಯಾಯವಾದಿಗಳಾದ ಎಮ್,ಎಮ್.ಯಲಿಗಾರ, ಎಮ್.ಬಿ.ದ್ಯಾಮನಗೌಡರ, ಎಮ್.ಎನ್.ಮುತ್ತಿನ, ಎಮ್.ಎಸ್.ಕುರಿ, ಎಮ್,ಕೆ.ಹೊಸಮಠ ಸಿ.ಬಿ.ದುಂಡಿ, ಎ.ಎಮ್.ಭಾಗೋಜಿಕೊಪ್ಫ, ಸಿ.ಎಸ್.ಮುತ್ತಗಿ, ಎಸ್.ಎಸ್.ಮಾನೆ, ಬಿ.ಕೆ.ಕಡಕೋಳ, ಎಮ್.ಎಫ್.ಬಾಡಿಗೇರ, ಟಿ.ಎಮ್.ಸೂರ್ಯವಂಶಿ, ಎಮ್.ಎಸ್.ಪಂಚಿನವರ, ಎಮ್.ಎಸ್,ಹತ್ತಿ, ಎಸ್.ಎಸ್.ದೇವನಗಾಂವಿ, ಮುಂತಾದವರು ಉಪಸ್ಥಿತರಿದ್ದರು.